ಕೋಲ್ಕತ್ತ: ಮಂಗಳವಾರ ದುಬೈನಲ್ಲಿ ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಸಭೆಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹಾಜರಾಗುತ್ತಿಲ್ಲ.ಕೋವಿಡ್ ವೈರಸ್ ಸೋಂಕಿನ ಭೀತಿಯ ಕಾರಣ ಗಂಗೂಲಿ ಈ ನಿರ್ಧಾರ ಕೈಗೊಂಡಿದ್ದಾರೆಂದು ಮಂಡಳಿಯ ಮೂಲಗಳು ತಿಳಿಸಿವೆ.
‘ಯುಎಇಯಲ್ಲಿ ವೈರಸ್ ಸೋಂಕು ಹರಡುವ ಭೀತಿ ಇದೆ ಎನ್ನಲಾಗಿದೆ. ಆದ್ದರಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರು ಸಭೆಗೆ ಹಾಜರಾಗುವ ನಿರ್ಧಾರ ಕೈಬಿಟ್ಟಿದ್ದಾರೆ’ ಎಂದು ಹೇಳಲಾಗಿದೆ.