<p><strong>ಮುಂಬೈ:</strong>ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗಿರುವ ಮುಂಬೈ ಮಹಾನಗರವನ್ನು ಕೆಂಪು ವಲಯವನ್ನಾಗಿ ಗುರುತಿಸಿದ್ದು ಕ್ರೀಡಾ ಚಟುವಟಿಕೆಗಳು ಇನ್ನೂ ಆರಂಭಗೊಂಡಿಲ್ಲ. ಆದ್ದರಿಂದ ಪ್ರಮುಖ ಕ್ರಿಕೆಟಿಗರಾದ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರು ವೈಯಕ್ತಿಕ ಅಭ್ಯಾಸಕ್ಕೆ ಇನ್ನಷ್ಟು ಕಾಯಬೇಕಿದೆ.</p>.<p>ಮಹಾರಾಷ್ಟ್ರ ಸರ್ಕಾರವು ಹಸಿರು ಹಾಗೂ ಕಿತ್ತಳೆ ವಲಯಗಳಲ್ಲಿ ಕ್ರೀಡಾಂಗಣಗಳನ್ನು ಅಥ್ಲೀಟುಗಳ ತರಬೇತಿಗೆ ತೆರೆಯಲು ಅವಕಾಶ ಮಾಡಿಕೊಟ್ಟಿದೆ. ಆದರೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶವಿಲ್ಲ.</p>.<p>ಮುಂಬೈ ಅಲ್ಲದೆ ಅದರ ಪಕ್ಕದ ಪ್ರದೇಶಗಳಾದ ಥಾಣೆ, ನವೀ ಮುಂಬೈ, ಮೀರಾ ಭಯಂದರ್, ವಸಯೀ ವಿರಾರ್ ಹಾಗೂ ಕಲ್ಯಾಣ್ ಡೊಂಬಿವಿಲಿಗಳನ್ನು ಕೆಂಪು ವಲಯಗಳೆಂದು ಘೋಷಿಸಲಾಗಿದೆ.</p>.<p>‘ಕ್ರೀಡಾಂಗಣಗಳನ್ನು ಅಥ್ಲೀಟುಗಳ ಅಭ್ಯಾಸಕ್ಕೆ ಮುಕ್ತವಾಗಿಸುವ ವಿಷಯದಲ್ಲಿ ನಾವು ರಾಜ್ಯ ಸರ್ಕಾರದ ಮಾರ್ಗಸೂಚಿಗಳಿಗೆ ಬದ್ಧರಾಗಿದ್ದೇವೆ’ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ (ಎಂಸಿಎ) ಹಿರಿಯ ಅಧಿಕಾರಿಯೋರ್ವರು ಬುಧವಾರ ಹೇಳಿದರು.</p>.<p>ಮುಂಬೈನಲ್ಲಿ ಕೊರೊನಾ ಸೋಂಕಿನ 1,411 ಹೊಸ ಪ್ರಕರಣಗಳು ಸೇರಿ ಮಂಗಳವಾರ ಒಟ್ಟು ಪ್ರಕರಣಗಳ ಸಂಖ್ಯೆ 22,563ಕ್ಕೆ ತಲುಪಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಕೊರೊನಾ ಸೋಂಕು ಪ್ರಕರಣಗಳು ಅಧಿಕವಾಗಿರುವ ಮುಂಬೈ ಮಹಾನಗರವನ್ನು ಕೆಂಪು ವಲಯವನ್ನಾಗಿ ಗುರುತಿಸಿದ್ದು ಕ್ರೀಡಾ ಚಟುವಟಿಕೆಗಳು ಇನ್ನೂ ಆರಂಭಗೊಂಡಿಲ್ಲ. ಆದ್ದರಿಂದ ಪ್ರಮುಖ ಕ್ರಿಕೆಟಿಗರಾದ ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಹಾಗೂ ಅಜಿಂಕ್ಯಾ ರಹಾನೆ ಅವರು ವೈಯಕ್ತಿಕ ಅಭ್ಯಾಸಕ್ಕೆ ಇನ್ನಷ್ಟು ಕಾಯಬೇಕಿದೆ.</p>.<p>ಮಹಾರಾಷ್ಟ್ರ ಸರ್ಕಾರವು ಹಸಿರು ಹಾಗೂ ಕಿತ್ತಳೆ ವಲಯಗಳಲ್ಲಿ ಕ್ರೀಡಾಂಗಣಗಳನ್ನು ಅಥ್ಲೀಟುಗಳ ತರಬೇತಿಗೆ ತೆರೆಯಲು ಅವಕಾಶ ಮಾಡಿಕೊಟ್ಟಿದೆ. ಆದರೆ ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶವಿಲ್ಲ.</p>.<p>ಮುಂಬೈ ಅಲ್ಲದೆ ಅದರ ಪಕ್ಕದ ಪ್ರದೇಶಗಳಾದ ಥಾಣೆ, ನವೀ ಮುಂಬೈ, ಮೀರಾ ಭಯಂದರ್, ವಸಯೀ ವಿರಾರ್ ಹಾಗೂ ಕಲ್ಯಾಣ್ ಡೊಂಬಿವಿಲಿಗಳನ್ನು ಕೆಂಪು ವಲಯಗಳೆಂದು ಘೋಷಿಸಲಾಗಿದೆ.</p>.<p>‘ಕ್ರೀಡಾಂಗಣಗಳನ್ನು ಅಥ್ಲೀಟುಗಳ ಅಭ್ಯಾಸಕ್ಕೆ ಮುಕ್ತವಾಗಿಸುವ ವಿಷಯದಲ್ಲಿ ನಾವು ರಾಜ್ಯ ಸರ್ಕಾರದ ಮಾರ್ಗಸೂಚಿಗಳಿಗೆ ಬದ್ಧರಾಗಿದ್ದೇವೆ’ ಎಂದು ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ (ಎಂಸಿಎ) ಹಿರಿಯ ಅಧಿಕಾರಿಯೋರ್ವರು ಬುಧವಾರ ಹೇಳಿದರು.</p>.<p>ಮುಂಬೈನಲ್ಲಿ ಕೊರೊನಾ ಸೋಂಕಿನ 1,411 ಹೊಸ ಪ್ರಕರಣಗಳು ಸೇರಿ ಮಂಗಳವಾರ ಒಟ್ಟು ಪ್ರಕರಣಗಳ ಸಂಖ್ಯೆ 22,563ಕ್ಕೆ ತಲುಪಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>