<p><strong>ನವದೆಹಲಿ: </strong>ಶೂಟರ್ ಅಪೂರ್ವಿ ಚಾಂಡೇಲಾ ಹಾಗೂ ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಅವರೂ ಕೋವಿಡ್ ಪೀಡಿತರಿಗೆ ನೆರವಿನ ಹಸ್ತ ಚಾಚಿದ್ದಾರೆ.</p>.<p>ಅಪೂರ್ವಿ ಮತ್ತು ಶ್ರೀಧರ್ ಅವರು ಕ್ರಮವಾಗಿ ₹5 ಹಾಗೂ ₹4 ಲಕ್ಷ ದೇಣಿಗೆ ನೀಡಿದ್ದಾರೆ.</p>.<p>ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿರುವ ರೈಫಲ್ ಶೂಟರ್ ಅಪೂರ್ವಿ ಅವರು ಪ್ರಧಾನ ಮಂತ್ರಿಗಳ ‘ಕೇರ್ಸ್’ ನಿಧಿಗೆ ₹3 ಲಕ್ಷ ಹಾಗೂ ರಾಜಸ್ಥಾನದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹2 ಲಕ್ಷ ಕೊಟ್ಟಿದ್ದಾರೆ.</p>.<p>‘ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನನ್ನ ಕರ್ತವ್ಯವನ್ನು ಪಾಲಿಸಲು ಮುಂದಾಗಿದ್ದೇನೆ. ಪ್ರಧಾನ ಮಂತ್ರಿಗಳ ‘ಕೇರ್ಸ್’ ನಿಧಿಗೆ ₹2 ಲಕ್ಷ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.5 ಲಕ್ಷ ಹಾಗೂ ಸಿಕಂದರಾಬಾದ್ ಕಂಟೋನ್ಮೆಂಟ್ ಬೋರ್ಡ್ಗೆ ₹50 ಸಾವಿರ ದೇಣಿಗೆ ನೀಡಿದ್ದೇನೆ’ ಎಂದು ಶ್ರೀಧರ್, ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p>ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ₹ 10 ಲಕ್ಷ ದೇಣಿಗೆ ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಶೂಟರ್ ಅಪೂರ್ವಿ ಚಾಂಡೇಲಾ ಹಾಗೂ ಭಾರತ ಕ್ರಿಕೆಟ್ ತಂಡದ ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಅವರೂ ಕೋವಿಡ್ ಪೀಡಿತರಿಗೆ ನೆರವಿನ ಹಸ್ತ ಚಾಚಿದ್ದಾರೆ.</p>.<p>ಅಪೂರ್ವಿ ಮತ್ತು ಶ್ರೀಧರ್ ಅವರು ಕ್ರಮವಾಗಿ ₹5 ಹಾಗೂ ₹4 ಲಕ್ಷ ದೇಣಿಗೆ ನೀಡಿದ್ದಾರೆ.</p>.<p>ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿರುವ ರೈಫಲ್ ಶೂಟರ್ ಅಪೂರ್ವಿ ಅವರು ಪ್ರಧಾನ ಮಂತ್ರಿಗಳ ‘ಕೇರ್ಸ್’ ನಿಧಿಗೆ ₹3 ಲಕ್ಷ ಹಾಗೂ ರಾಜಸ್ಥಾನದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹2 ಲಕ್ಷ ಕೊಟ್ಟಿದ್ದಾರೆ.</p>.<p>‘ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ನನ್ನ ಕರ್ತವ್ಯವನ್ನು ಪಾಲಿಸಲು ಮುಂದಾಗಿದ್ದೇನೆ. ಪ್ರಧಾನ ಮಂತ್ರಿಗಳ ‘ಕೇರ್ಸ್’ ನಿಧಿಗೆ ₹2 ಲಕ್ಷ, ತೆಲಂಗಾಣ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.5 ಲಕ್ಷ ಹಾಗೂ ಸಿಕಂದರಾಬಾದ್ ಕಂಟೋನ್ಮೆಂಟ್ ಬೋರ್ಡ್ಗೆ ₹50 ಸಾವಿರ ದೇಣಿಗೆ ನೀಡಿದ್ದೇನೆ’ ಎಂದು ಶ್ರೀಧರ್, ಗುರುವಾರ ಟ್ವೀಟ್ ಮಾಡಿದ್ದಾರೆ.</p>.<p>ಭಾರತ ಬ್ಯಾಡ್ಮಿಂಟನ್ ಸಂಸ್ಥೆಯು (ಬಿಎಐ) ₹ 10 ಲಕ್ಷ ದೇಣಿಗೆ ಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>