ಬಾಗೇಪಲ್ಲಿ ತಾಲ್ಲೂಕಿನ ಗುಂಟಿಗಾನಹಳ್ಳಿಯ ಕೃಷಿಕ ಕುಟುಂಬದಲ್ಲಿ ಜನಿಸಿದ ಶಿವಶಂಕರ, ಅನೇಕ ಕಷ್ಟಗಳನ್ನು ಎದುರಿಸಿ ಧೈರ್ಯದಿಂದ ಬೆಳೆದರು. ಸದ್ಯ ಬೆಂಗಳೂರಿನ ಆರ್.ಸಿ ಕಾಲೇಜಿನಲ್ಲಿ ಕೊನೆಯ ವರ್ಷದ ಬಿ.ಕಾಂ ಓದುತ್ತಿದ್ದಾರೆ. ಫ್ರತಿ ದಿನ ಆರು ತಾಸು ಕ್ರಿಕೆಟ್ ಅಭ್ಯಾಸ ಮಾಡುವ ಶಿವಶಂಕರ್, ತಮ್ಮ ವಿಭಾಗದ ಟೂರ್ನಿಯಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಾರೆ. ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿ ಅವರ ಆಟವನ್ನು ಶಿವಶಂಕರ್ ಪ್ರೀತಿಸುತ್ತಾರೆ.