ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ಇಲ್ಲಿನಫಿರೋಜ್ ಷಾ ಕೋಟ್ಲಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಆದರೆ,ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕತ್ವದ ಹೊಣೆ ಹೊತ್ತಿರುವ ರೋಹಿತ್ ಶರ್ಮಾ ಬಳಗದ ಆರಂಭ ಚೆನ್ನಾಗಿರಲಿಲ್ಲ. ರೋಹಿತ್ ಕೇವಲ 9ರನ್ ಗಳಿಸಿ ಔಟಾದರೆ, ಕನ್ನಡಿಗ ಕೆ.ಎಲ್. ರಾಹುಲ್ 15 ರನ್ ಗಳಿಗೆ ಪೆವಿಲಿಯನ್ ಹಾದಿ ಹಿಡಿದರು.