‘ಮಂಡಳಿಯ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಮತ್ತು ಪದಾಧಿಕಾರಿಗಳು, ರಾಜ್ಯ ಸಂಸ್ಥೆಗಳ ಒಮ್ಮತದ ನಿರ್ಣಯದೊಂದಿಗೆ ಪರಿಹಾರ ನಿಧಿಗೆ ದೇಣಿಗೆ ನಿರ್ಧಾರ ಮಾಡಲಾಗಿದೆ. ಕೊರೊನಾ ವೈರಸ್ ಪಿಡುಗು ತಡೆಯಲು ಮತ್ತು ತೊಂದರೆಗೊಳಗಾಗಿರುವ ಜನರಿಗೆ ನೆರವು ನೀಡಲು ಸರ್ಕಾರವು ಪ್ರಯತ್ನಿಸುತ್ತಿದೆ. ಅದಕ್ಕಾಗಿ ನಾವೂ ಕೈಜೋಡಿಸಿದ್ದೇವೆ’ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಲಾಗಿದೆ.