<p><strong>ನವದೆಹಲಿ:</strong> ಕೊರೊನಾ ಭೀತಿಯಿಂದಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳನ್ನು ರದ್ದು ಮಾಡಲಾಗಿದೆ.</p>.<p>ಭಾರತದಲ್ಲಿ ಕೊರೊನಾ ಶಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಲಖನೌ (ಮಾರ್ಚ್ 15) ಹಾಗೂ ಕೋಲ್ಕತ್ತದಲ್ಲಿ (ಮಾರ್ಚ್ 18) ನಿಗದಿಯಾಗಿರುವ ಪಂದ್ಯಗಳಲ್ಲಿ ಆಡಲು ದಕ್ಷಿಣ ಆಫ್ರಿಕಾದ ಆಟಗಾರರು ಹಿಂದೇಟು ಹಾಕಿದ್ದಾರೆ. ಹೀಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಅನಿವಾರ್ಯವಾಗಿ ಸರಣಿಯನ್ನು ಅರ್ಧದಲ್ಲೇ ರದ್ದು ಮಾಡಿದೆ.</p>.<p>‘ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಆತಂಕಗೊಂಡಿದ್ದಾರೆ. ಆದಷ್ಟು ಬೇಗ ತವರಿಗೆ ಹಿಂತಿರುಗಲು ಮುಂದಾಗಿದ್ದಾರೆ. ಹೀಗಾಗಿ ಸರಣಿಯನ್ನು ರದ್ದು ಮಾಡಲಾಗಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಕೊರೊನಾ ಆತಂಕ ದೂರವಾದ ಬಳಿಕ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮತ್ತೊಮ್ಮೆ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಆಯೋಜಿಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) ಜೊತೆ ಚರ್ಚಿಸಿ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸುತ್ತೇವೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>‘ದಕ್ಷಿಣ ಆಫ್ರಿಕಾದ ಆಟಗಾರರು ನವದೆಹಲಿಗೆ ಬಂದು ಅಲ್ಲಿಂದ ಲಭ್ಯವಿರುವ ವಿಮಾನದಲ್ಲಿ ತವರಿಗೆ ಹೋಗಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<p>‘ಹಣಕ್ಕಿಂತಲೂ ಆಟಗಾರರ ಆರೋಗ್ಯವೇ ಮುಖ್ಯ. ಹೀಗಾಗಿ ಸರಣಿ ರದ್ದು ಮಾಡಲಾಗಿದೆ. ಇದು ಉತ್ತಮ ನಿರ್ಧಾರ’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.</p>.<p>ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಉಭಯ ತಂಡಗಳ ನಡುವಣ ಮೊದಲ ಏಕದಿನ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಕೊರೊನಾ ಆತಂಕದಿಂದಾಗಿ ಉಳಿದ ಎರಡು ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ನಡೆಸಲು ಈ ಮೊದಲು ಬಿಸಿಸಿಐ ಚಿಂತಿಸಿತ್ತು.</p>.<p><strong>ಇಂಗ್ಲೆಂಡ್–ಲಂಕಾ ಸರಣಿ ರದ್ದು:</strong> ಕೊರೊನಾ ಆತಂಕದಿಂದಾಗಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ರದ್ದು ಮಾಡಲಾಗಿದೆ.</p>.<p>ಉಭಯ ತಂಡಗಳ ನಡುವಣ ಮೊದಲ ಟೆಸ್ಟ್ ಇದೇ ತಿಂಗಳ 19ರಂದು ಗಾಲ್ನಲ್ಲಿ ನಿಗದಿಯಾಗಿತ್ತು.</p>.<p>‘ವಿಶ್ವದೆಲ್ಲೆಡೆ ಕೊರೊನಾ ಕರಿನೆರಳು ಆವರಿಸಿರುವುದರಿಂದ ಆಟಗಾರರಲ್ಲೂ ಆತಂಕ ಮನೆಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಕ್ರಿಕೆಟ್ಗಿಂತಲೂ ಆಟಗಾರರ ಹಿತ ಮುಖ್ಯ. ಹೀಗಾಗಿ ಅವರನ್ನು ತವರಿಗೆ ಮರಳುವಂತೆ ಸೂಚಿಸಿದ್ದೇವೆ’ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೊರೊನಾ ಭೀತಿಯಿಂದಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಏಕದಿನ ಕ್ರಿಕೆಟ್ ಸರಣಿಯ ಎರಡು ಮತ್ತು ಮೂರನೇ ಪಂದ್ಯಗಳನ್ನು ರದ್ದು ಮಾಡಲಾಗಿದೆ.</p>.<p>ಭಾರತದಲ್ಲಿ ಕೊರೊನಾ ಶಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಲಖನೌ (ಮಾರ್ಚ್ 15) ಹಾಗೂ ಕೋಲ್ಕತ್ತದಲ್ಲಿ (ಮಾರ್ಚ್ 18) ನಿಗದಿಯಾಗಿರುವ ಪಂದ್ಯಗಳಲ್ಲಿ ಆಡಲು ದಕ್ಷಿಣ ಆಫ್ರಿಕಾದ ಆಟಗಾರರು ಹಿಂದೇಟು ಹಾಕಿದ್ದಾರೆ. ಹೀಗಾಗಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಅನಿವಾರ್ಯವಾಗಿ ಸರಣಿಯನ್ನು ಅರ್ಧದಲ್ಲೇ ರದ್ದು ಮಾಡಿದೆ.</p>.<p>‘ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ಆತಂಕಗೊಂಡಿದ್ದಾರೆ. ಆದಷ್ಟು ಬೇಗ ತವರಿಗೆ ಹಿಂತಿರುಗಲು ಮುಂದಾಗಿದ್ದಾರೆ. ಹೀಗಾಗಿ ಸರಣಿಯನ್ನು ರದ್ದು ಮಾಡಲಾಗಿದೆ’ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>‘ಕೊರೊನಾ ಆತಂಕ ದೂರವಾದ ಬಳಿಕ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಮತ್ತೊಮ್ಮೆ ಮೂರು ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿ ಆಯೋಜಿಸಲು ನಿರ್ಧರಿಸಿದ್ದೇವೆ. ಈ ಸಂಬಂಧ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್ಎ) ಜೊತೆ ಚರ್ಚಿಸಿ ದಿನಾಂಕ ಮತ್ತು ಸ್ಥಳವನ್ನು ನಿಗದಿಪಡಿಸುತ್ತೇವೆ’ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.</p>.<p>‘ದಕ್ಷಿಣ ಆಫ್ರಿಕಾದ ಆಟಗಾರರು ನವದೆಹಲಿಗೆ ಬಂದು ಅಲ್ಲಿಂದ ಲಭ್ಯವಿರುವ ವಿಮಾನದಲ್ಲಿ ತವರಿಗೆ ಹೋಗಲಿದ್ದಾರೆ’ ಎಂದೂ ಅವರು ತಿಳಿಸಿದ್ದಾರೆ.</p>.<p>‘ಹಣಕ್ಕಿಂತಲೂ ಆಟಗಾರರ ಆರೋಗ್ಯವೇ ಮುಖ್ಯ. ಹೀಗಾಗಿ ಸರಣಿ ರದ್ದು ಮಾಡಲಾಗಿದೆ. ಇದು ಉತ್ತಮ ನಿರ್ಧಾರ’ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಪ್ರತಿಕ್ರಿಯಿಸಿದ್ದಾರೆ.</p>.<p>ಧರ್ಮಶಾಲಾದಲ್ಲಿ ನಿಗದಿಯಾಗಿದ್ದ ಉಭಯ ತಂಡಗಳ ನಡುವಣ ಮೊದಲ ಏಕದಿನ ಪಂದ್ಯವು ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದಾಗಿತ್ತು. ಕೊರೊನಾ ಆತಂಕದಿಂದಾಗಿ ಉಳಿದ ಎರಡು ಪಂದ್ಯಗಳನ್ನು ಖಾಲಿ ಕ್ರೀಡಾಂಗಣದಲ್ಲಿ ನಡೆಸಲು ಈ ಮೊದಲು ಬಿಸಿಸಿಐ ಚಿಂತಿಸಿತ್ತು.</p>.<p><strong>ಇಂಗ್ಲೆಂಡ್–ಲಂಕಾ ಸರಣಿ ರದ್ದು:</strong> ಕೊರೊನಾ ಆತಂಕದಿಂದಾಗಿ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಣ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ರದ್ದು ಮಾಡಲಾಗಿದೆ.</p>.<p>ಉಭಯ ತಂಡಗಳ ನಡುವಣ ಮೊದಲ ಟೆಸ್ಟ್ ಇದೇ ತಿಂಗಳ 19ರಂದು ಗಾಲ್ನಲ್ಲಿ ನಿಗದಿಯಾಗಿತ್ತು.</p>.<p>‘ವಿಶ್ವದೆಲ್ಲೆಡೆ ಕೊರೊನಾ ಕರಿನೆರಳು ಆವರಿಸಿರುವುದರಿಂದ ಆಟಗಾರರಲ್ಲೂ ಆತಂಕ ಮನೆಮಾಡಿದೆ. ಇಂತಹ ಪರಿಸ್ಥಿತಿಯಲ್ಲಿ ನಮಗೆ ಕ್ರಿಕೆಟ್ಗಿಂತಲೂ ಆಟಗಾರರ ಹಿತ ಮುಖ್ಯ. ಹೀಗಾಗಿ ಅವರನ್ನು ತವರಿಗೆ ಮರಳುವಂತೆ ಸೂಚಿಸಿದ್ದೇವೆ’ ಎಂದು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ಇಸಿಬಿ) ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>