‘ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಆರೋಪಿಗಳು ತಮ್ಮ ಹೇಳಿಕೆಯಲ್ಲಿ ಸುಧೀಂದ್ರ ಶಿಂಧೆ ಹೆಸರು ಪ್ರಸ್ತಾಪಿಸಿದ್ದರು. ಅದನ್ನು ಆಧರಿಸಿ ಅವರಿಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಬಂದಿರಲಿಲ್ಲ. ಇದೀಗ ಅವರನ್ನು ಬಂಧಿಸಲಾಗಿದ್ದು, ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೋರಲಾಗುವುದು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ಹೇಳಿದರು.