ಕೊಡಗಿನ ವಿರಾಜಪೇಟೆ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಕೋರಿ ಕಾಂಗ್ರೆಸ್ ಮುಖಂಡ ಹರೀಶ್ ಬೋಪಣ್ಣ ನೇತೃತ್ವದ ನಿಯೋಗವು ಪ್ರಚಾರದ ವೇಳೆಯೇ ಭೇಟಿ ನೀಡಿತು. ಚಾಮುಂಡೇಶ್ವರಿ ಕ್ಷೇತ್ರದ ಗೋಹಳ್ಳಿ ಬಳಿ ಸಿದ್ದರಾಮಯ್ಯ ಅವರ ಕಾರನ್ನು ತಡೆದು ಟಿಕೆಟ್ ಕೊಡುವಂತೆ ಮನವಿ ಮಾಡಿತು. ‘ಟಿಕೆಟ್ ಕೊಡಲು ಕಾಲ ಮಿಂಚಿದೆ’ ಎಂದು ಅವರು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಬೋಪಣ್ಣ, ತಾವು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕಾಗುತ್ತದೆ ಎಂದರು.