‘ನನ್ನ ಮನೆಯಿಂದ 100 ಮೀಟರ್ಸ್ ದೂರದಲ್ಲಿ ದೆಹಲಿಯಿಂದ ಕಾನ್ಪುರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಇದೆ. ಆ ಮಾರ್ಗವಾಗಿ ಸಾವಿರಾರು ಮಂದಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ ಎಂಬ ಸುದ್ದಿಯನ್ನು ಟಿ.ವಿ.ಯಲ್ಲಿ ನೋಡಿ ಮನಸ್ಸು ಭಾರವಾಯಿತು. ಅವರಿಗೆ ಆಹಾರ ಮತ್ತು ನೀರು ಪೂರೈಸಬೇಕೆಂದು ಅನಿಸಿತು. ನನ್ನ ಮನದಿಂಗಿತವನ್ನು ಕುಟುಂಬದವರ ಬಳಿ ವ್ಯಕ್ತಪಡಿಸಿದೆ. ಅದಕ್ಕವರು ಒಪ್ಪಿದರು. ನಮ್ಮ ಕಾರ್ಯಕ್ಕೆ ಸ್ನೇಹಿತರೂ ಕೈಜೋಡಿಸಿದರು’ ಎಂದು ತಜಿಂದರ್ ಅವರು ಕಿಂಗ್ಸ್ ಇಲೆವನ್ ವೆಬ್ಸೈಟ್ಗೆ ತಿಳಿಸಿದ್ದಾರೆ.