ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಏಳು ವಿಕೆಟ್ಗಳಿಂದ ರಿಷಭ್ ಪಂತ್ ನಾಯಕತ್ವದ ತಂಡಕ್ಕೆ ಮಣಿದಿತ್ತು. ನಿಗದಿತ ಅವಧಿಯಲ್ಲಿ ಬೌಲಿಂಗ್ ಮುಕ್ತಾಯಗೊಳಿಸದೇ ಇರುವುದಕ್ಕೆ ಐಪಿಎಲ್ ನಿಯಮಾವಳಿಗಳ ಪ್ರಕಾರ ದಂಡ ವಿಧಿಸಲಾಗಿದೆ ಎಂದು ಟೂರ್ನಿಯ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.