ಮೊದಲ ಸುತ್ತಿನಲ್ಲಿ ಕೋಲ್ಕತ್ತ ತಂಡವು ಚೆನ್ನೈ ವಿರುದ್ಧ ಗೆದ್ದಿತ್ತು. ಧೋನಿ ಬಳಗವು ಆ ಸೋಲಿನ ಸೇಡು ತೀರಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಯುವ ಆಟಗಾರ ಋತುರಾಜ್ ಗಾಯಕವಾಡ್, ಫಾಫ್ ಡುಪ್ಲೆಸಿ, ಅಂಬಟಿ ರಾಯುಡು, ಧೋನಿ. ಆಲ್ರೌಂಡರ್ಗಳಾದ ರವೀಂದ್ರ ಜಡೇಜ ಮತ್ತು ಸ್ಯಾಮ ಕರನ್ ಅವರು ಬ್ಯಾಟಿಂಗ್ನಲ್ಲಿಯೂ ಮಿಂಚುವ ಅನಿವಾರ್ಯತೆ ಇದೆ. ಕೋಲ್ಕತ್ತ ಬೌಲರ್ಗಳಾದ ವರುಣ ಚಕ್ರವರ್ತಿ, ಪ್ಯಾಟ್ ಕಮಿನ್ಸ್ , ಸುನೀಲ್ ನಾರಾಯಣ್ ಮತ್ತು ಲಾಕಿ ಫರ್ಗ್ಯುಸನ್ ಅವರನ್ನು ಚೆನ್ನೈ ಬ್ಯಾಟಿಂಗ್ ಪಡೆ ಎದುರಿಸಬೇಕಿದೆ.