ಮೂರು ಬಾರಿಯ ಚಾಂಪಿಯನ್ ಸಿಎಸ್ಕೆ ತಂಡ ಇದೇ ತಿಂಗಳ ಎರಡರಿಂದ ಇಲ್ಲಿನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ತಾಲೀಮು ಆರಂಭಿಸಿತ್ತು. ನಾಯಕ ಮಹೇಂದ್ರ ಸಿಂಗ್ ಧೋನಿ, ಸುರೇಶ್ ರೈನಾ, ಅಂಬಟಿ ರಾಯುಡು, ರವೀಂದ್ರ ಜಡೇಜ, ಮುರಳಿ ವಿಜಯ್, ಪೀಯೂಷ್ ಚಾವ್ಲಾ ಸೇರಿದಂತೆ ಹಲವು ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡಿದ್ದರು. ಇವರನ್ನು ನೋಡಲು ನಿತ್ಯವೂ ಸಾವಿರಾರು ಮಂದಿ ಕ್ರೀಡಾಂಗಣಕ್ಕೆ ಬರುತ್ತಿದ್ದರು.