<p><strong>ನವದೆಹಲಿ</strong>: ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಅಸಂಭವ ಎನಿಸುತ್ತಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಡೇವಿಡ್ ವಾರ್ನರ್ ಅಭಿಪ್ರಾಪಟ್ಟಿದ್ದಾರೆ.</p>.<p>ಕೊವಿಡ್ –19 ವೈರಸ್ನಿಂದಾಗಿ ಕ್ರಿಕೆಟ್ ಚಟುವಟಿಕೆಗಳು ಸ್ಥಗಿತವಾಗಿವೆ. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯು ಅನಿಶ್ಚಿತವಾಗಿದೆ.ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇನ್ನೂ ಅಂತಿಮ ನಿರ್ಣಯ ಪ್ರಕಟಿಸಿಲ್ಲ.</p>.<p>ಈ ಕುರಿತು ಭಾರತದ ರೋಹಿತ್ ಶರ್ಮಾ ಅವರೊಂದಿಗೆ ನಡೆಸಿದ ಸಂವಾದದಲ್ಲಿ ವಾರ್ನರ್ ಈ ಮಾತು ಹೇಳಿದ್ದಾರೆ.</p>.<p>‘ಆಸ್ಟ್ರೇಲಿಯಾದಲ್ಲಿ ಭಾರತವು ಸರಣಿ ಆಡುವುದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಅಮೋಘ ಪುನರಾರಂಭ ನೀಡಿದಂತಾಗುತ್ತದೆ. ಆಸ್ಟ್ರೇಲಿಯಾ ತಂಡದ ಎದುರು ಆಡುವುದೆಂದರೆ ನನಗೆ ಬಹಳ ಇಷ್ಟ. ಹೋದ ವರ್ಷ ಅಲ್ಲಿ ನಾವು ಗೆದ್ದಾಗ ವಾರ್ನರ್ ಮತ್ತು ಸ್ಮಿತ್ ಇರಲಿಲ್ಲ. ಈ ಬಾರಿ ಅವರಿದ್ದಾಗ ಆಡುವುದು ಸವಾಲು’ ಎಂದು ರೋಹಿತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸದ್ಯದ ಪರಿಸ್ಥಿತಿಯನ್ನು ನೋಡಿದರೆ ಅಕ್ಟೋಬರ್ನಲ್ಲಿ ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಅಸಂಭವ ಎನಿಸುತ್ತಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಆಟಗಾರ ಡೇವಿಡ್ ವಾರ್ನರ್ ಅಭಿಪ್ರಾಪಟ್ಟಿದ್ದಾರೆ.</p>.<p>ಕೊವಿಡ್ –19 ವೈರಸ್ನಿಂದಾಗಿ ಕ್ರಿಕೆಟ್ ಚಟುವಟಿಕೆಗಳು ಸ್ಥಗಿತವಾಗಿವೆ. ಅಕ್ಟೋಬರ್ನಲ್ಲಿ ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಟೂರ್ನಿಯು ಅನಿಶ್ಚಿತವಾಗಿದೆ.ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇನ್ನೂ ಅಂತಿಮ ನಿರ್ಣಯ ಪ್ರಕಟಿಸಿಲ್ಲ.</p>.<p>ಈ ಕುರಿತು ಭಾರತದ ರೋಹಿತ್ ಶರ್ಮಾ ಅವರೊಂದಿಗೆ ನಡೆಸಿದ ಸಂವಾದದಲ್ಲಿ ವಾರ್ನರ್ ಈ ಮಾತು ಹೇಳಿದ್ದಾರೆ.</p>.<p>‘ಆಸ್ಟ್ರೇಲಿಯಾದಲ್ಲಿ ಭಾರತವು ಸರಣಿ ಆಡುವುದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಅಮೋಘ ಪುನರಾರಂಭ ನೀಡಿದಂತಾಗುತ್ತದೆ. ಆಸ್ಟ್ರೇಲಿಯಾ ತಂಡದ ಎದುರು ಆಡುವುದೆಂದರೆ ನನಗೆ ಬಹಳ ಇಷ್ಟ. ಹೋದ ವರ್ಷ ಅಲ್ಲಿ ನಾವು ಗೆದ್ದಾಗ ವಾರ್ನರ್ ಮತ್ತು ಸ್ಮಿತ್ ಇರಲಿಲ್ಲ. ಈ ಬಾರಿ ಅವರಿದ್ದಾಗ ಆಡುವುದು ಸವಾಲು’ ಎಂದು ರೋಹಿತ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>