‘ವಿಶಾಖಪಟ್ಟಣದಲ್ಲಿ ನಡೆದಿದ್ದ ಎರಡನೇ ಪಂದ್ಯದ ವೇಳೆ ದೀಪಕ್ ಬೆನ್ನು ನೋವಿನಿಂದ ಬಳಲಿದ್ದರು. ಅವರಿಗೆ ಚಿಕಿತ್ಸೆ ನೀಡಿದ್ದ ವೈದ್ಯಕೀಯ ತಂಡ ಕೆಲಕಾಲ ವಿಶ್ರಾಂತಿ ಪಡೆಯಲು ಸೂಚಿಸಿದೆ. ಹೀಗಾಗಿ ಅವರು ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿಲ್ಲ’ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ), ಪ್ರಕಟಣೆಯಲ್ಲಿ ತಿಳಿಸಿದೆ.