<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಡಲ್ಲಿ ಕ್ಯಾಪಿಟಲ್ಸ್ ತಂಡದ ಶಾರ್ದೂಲ್ ಠಾಕೂರ್, ಕೆ.ಎಸ್. ಭರತ್ ಹಾಗೂ ನ್ಯೂಜಿಲೆಂಡ್ ಆಟಗಾರ ಟಿಮ್ ಸೀಫರ್ಟ್ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ.</p>.<p>ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆಡುವ ತಂಡಗಳು ತಮ್ಮ ಆಟಗಾರರನ್ನು ಉಳಿಸಿಕೊಳ್ಳಲು ನವೆಂಬರ್ 15 ಕೊನೆಯ ದಿನವಾಗಿದೆ. ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಹೊಸ ಆಟಗಾರರನ್ನು ಖರೀದಿಸುವ ಅವಕಾಶ ತಂಡಗಳಿಗೆ ಇರುವುದರಿಂದ ಈಗ ಕೆಲವು ಆಟಗಾರರನ್ನು ಬಿಡುಗಡೆ ಮಾಡುತ್ತಿದ್ದಾರೆ.</p>.<p>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಆವೃತ್ತಿಯಲ್ಲಿ ಶಾರ್ದೂಲ್ ಅವರನ್ನು ₹ 10.75 ಕೋಟಿ ಕೊಟ್ಟು ಖರೀದಿಸಿತ್ತು. 14 ಪಂದ್ಯಗಳನ್ನು ಆಡಿದ್ದ ಅವರು ಪ್ರತಿ ಓವರ್ಗೆ ಸರಾಸರಿ 10 ರನ್ ನೀಡಿದ್ದರು. ಬ್ಯಾಟಿಂಗ್ನಲ್ಲಿ 120 ರನ್ಗಳನ್ನು ಗಳಿಸಿದ್ದರು.</p>.<p>ಈ ಮೂವರಲ್ಲದೇ ಮನದೀಪ್ ಸಿಂಗ್ ಮತ್ತು ಆಂಧ್ರ ತಂಡದ ಆರಂಭಿಕ ಆಟಗಾರ ಅಶ್ವಿನ್ ಹೆಬ್ಬಾರ್ ಅವರನ್ನು ಬಿಡುಗಡೆ ಮಾಡುವುದಾಗಿ ತಂಡದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಡಲ್ಲಿ ಕ್ಯಾಪಿಟಲ್ಸ್ ತಂಡದ ಶಾರ್ದೂಲ್ ಠಾಕೂರ್, ಕೆ.ಎಸ್. ಭರತ್ ಹಾಗೂ ನ್ಯೂಜಿಲೆಂಡ್ ಆಟಗಾರ ಟಿಮ್ ಸೀಫರ್ಟ್ ಅವರನ್ನು ಬಿಡುಗಡೆ ಮಾಡಲಾಗುತ್ತಿದೆ.</p>.<p>ಮುಂದಿನ ಐಪಿಎಲ್ ಟೂರ್ನಿಯಲ್ಲಿ ಆಡುವ ತಂಡಗಳು ತಮ್ಮ ಆಟಗಾರರನ್ನು ಉಳಿಸಿಕೊಳ್ಳಲು ನವೆಂಬರ್ 15 ಕೊನೆಯ ದಿನವಾಗಿದೆ. ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯಲಿರುವ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಹೊಸ ಆಟಗಾರರನ್ನು ಖರೀದಿಸುವ ಅವಕಾಶ ತಂಡಗಳಿಗೆ ಇರುವುದರಿಂದ ಈಗ ಕೆಲವು ಆಟಗಾರರನ್ನು ಬಿಡುಗಡೆ ಮಾಡುತ್ತಿದ್ದಾರೆ.</p>.<p>ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕಳೆದ ಆವೃತ್ತಿಯಲ್ಲಿ ಶಾರ್ದೂಲ್ ಅವರನ್ನು ₹ 10.75 ಕೋಟಿ ಕೊಟ್ಟು ಖರೀದಿಸಿತ್ತು. 14 ಪಂದ್ಯಗಳನ್ನು ಆಡಿದ್ದ ಅವರು ಪ್ರತಿ ಓವರ್ಗೆ ಸರಾಸರಿ 10 ರನ್ ನೀಡಿದ್ದರು. ಬ್ಯಾಟಿಂಗ್ನಲ್ಲಿ 120 ರನ್ಗಳನ್ನು ಗಳಿಸಿದ್ದರು.</p>.<p>ಈ ಮೂವರಲ್ಲದೇ ಮನದೀಪ್ ಸಿಂಗ್ ಮತ್ತು ಆಂಧ್ರ ತಂಡದ ಆರಂಭಿಕ ಆಟಗಾರ ಅಶ್ವಿನ್ ಹೆಬ್ಬಾರ್ ಅವರನ್ನು ಬಿಡುಗಡೆ ಮಾಡುವುದಾಗಿ ತಂಡದ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>