<p><strong>ನವದೆಹಲಿ:</strong> ‘ಐಪಿಎಲ್ನಲ್ಲಿ ಆಡುವ ಎಲ್ಲಾ ತಂಡಗಳಲ್ಲೂ ಪ್ರತಿಭಾನ್ವಿತ ಆಟಗಾರರ ದೊಡ್ಡ ದಂಡು ಇರುತ್ತದೆ. ಹೀಗಾಗಿ ಎಲ್ಲರಿಗೂ ಎಲ್ಲಾ ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಅವಕಾಶ ಸಿಗುವುದಿಲ್ಲ. ಅವಕಾಶ ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆ ಕೆಲಸವನ್ನು ನಾನು ಮಾಡುತ್ತಿದ್ದೇನೆ’ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂದೀಪ್ ಲಮಿಚಾನೆ ತಿಳಿಸಿದ್ದಾರೆ.</p>.<p>ನೇಪಾಳದ ಸಂದೀಪ್, ಶನಿವಾರ ನಡೆದಿದ್ದ ಕಿಂಗ್ಸ್ ಇಲೆವನ್ ಪಂಜಾಬ್ ಎದುರಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್, ಕ್ರಿಸ್ ಗೇಲ್ ಮತ್ತು ಸ್ಯಾಮ್ ಕರನ್ ವಿಕೆಟ್ ಉರುಳಿಸಿ ಗಮನ ಸೆಳೆದಿದ್ದರು. ಡೆಲ್ಲಿ ತಂಡ 5 ವಿಕೆಟ್ಗಳಿಂದ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.</p>.<p>ಪಂದ್ಯದ ಬಳಿಕ ಮಾತನಾಡಿದ ಅವರು ‘ತಂಡದ ಆಡಳಿತ ಮಂಡಳಿ ನನ್ನ ಮೇಲೆ ನಂಬಿಕೆ ಇಟ್ಟು ಆಡುವ ಬಳಗದಲ್ಲಿ ಸ್ಥಾನ ನೀಡುತ್ತದೆ. ಅದನ್ನು ಉಳಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ’ ಎಂದರು.</p>.<p>‘ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದಿದ್ದಾಗ ತುಂಬಾ ಬೇಸರವಾಗುತ್ತದೆ. ತಂಡದ ಆಡಳಿತ ಮಂಡಳಿಯ ಆ ನಿರ್ಧಾರವನ್ನು ಎಲ್ಲರೂ ಗೌರವಿಸಲೇಬೇಕಾಗುತ್ತದೆ. ನಮ್ಮ ಸರದಿಗಾಗಿ ಕಾಯಬೇಕಾಗುತ್ತದೆ. ಕಠಿಣ ಅಭ್ಯಾಸ ನಡೆಸಿ ಹೊಸ ಕೌಶಲಗಳನ್ನು ಕಲಿಯುವುದರ ಜೊತೆಗೆ ಅವುಗಳನ್ನು ಮೈಗೂಡಿಸಿಕೊಂಡು ಮುಂದಡಿ ಇಡಬೇಕಾಗುತ್ತದೆ’ ಎಂದು 18 ವರ್ಷದ ಆಟಗಾರ ಹೇಳಿದ್ದಾರೆ.</p>.<p><strong>ಗೆಲುವಿಗೆ ಅಡಿಗಲ್ಲು ಇಟ್ಟ ಧವನ್:</strong> ‘ಶಿಖರ್ ಧವನ್ ಅಮೋಘ ಆಟ ಆಡಿದರು. ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ಅಡಿಗಲ್ಲು ಹಾಕಿದರು’ ಎಂದು ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ತಂಡಕ್ಕೆ ಧವನ್, ಉತ್ತಮ ಆರಂಭ ನೀಡಿದರು. ‘ಪವರ್ ಫ್ಲೇ’ಯಲ್ಲೇ ತಂಡದ ಖಾತೆಗೆ 60ರನ್ ಜಮೆಯಾಗಿದ್ದರಿಂದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ಒತ್ತಡ ರಹಿತವಾಗಿ ಆಡಲು ಸಾಧ್ಯವಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಐಪಿಎಲ್ನಲ್ಲಿ ಆಡುವ ಎಲ್ಲಾ ತಂಡಗಳಲ್ಲೂ ಪ್ರತಿಭಾನ್ವಿತ ಆಟಗಾರರ ದೊಡ್ಡ ದಂಡು ಇರುತ್ತದೆ. ಹೀಗಾಗಿ ಎಲ್ಲರಿಗೂ ಎಲ್ಲಾ ಪಂದ್ಯಗಳಲ್ಲೂ ಆಡುವ ಬಳಗದಲ್ಲಿ ಅವಕಾಶ ಸಿಗುವುದಿಲ್ಲ. ಅವಕಾಶ ಸಿಕ್ಕಾಗ ಅದನ್ನು ಸದುಪಯೋಗಪಡಿಸಿಕೊಳ್ಳಬೇಕು. ಆ ಕೆಲಸವನ್ನು ನಾನು ಮಾಡುತ್ತಿದ್ದೇನೆ’ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಂದೀಪ್ ಲಮಿಚಾನೆ ತಿಳಿಸಿದ್ದಾರೆ.</p>.<p>ನೇಪಾಳದ ಸಂದೀಪ್, ಶನಿವಾರ ನಡೆದಿದ್ದ ಕಿಂಗ್ಸ್ ಇಲೆವನ್ ಪಂಜಾಬ್ ಎದುರಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್, ಕ್ರಿಸ್ ಗೇಲ್ ಮತ್ತು ಸ್ಯಾಮ್ ಕರನ್ ವಿಕೆಟ್ ಉರುಳಿಸಿ ಗಮನ ಸೆಳೆದಿದ್ದರು. ಡೆಲ್ಲಿ ತಂಡ 5 ವಿಕೆಟ್ಗಳಿಂದ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರವಹಿಸಿದ್ದರು.</p>.<p>ಪಂದ್ಯದ ಬಳಿಕ ಮಾತನಾಡಿದ ಅವರು ‘ತಂಡದ ಆಡಳಿತ ಮಂಡಳಿ ನನ್ನ ಮೇಲೆ ನಂಬಿಕೆ ಇಟ್ಟು ಆಡುವ ಬಳಗದಲ್ಲಿ ಸ್ಥಾನ ನೀಡುತ್ತದೆ. ಅದನ್ನು ಉಳಿಸಿಕೊಳ್ಳಲು ಶಕ್ತಿಮೀರಿ ಪ್ರಯತ್ನಿಸುತ್ತೇನೆ’ ಎಂದರು.</p>.<p>‘ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗದಿದ್ದಾಗ ತುಂಬಾ ಬೇಸರವಾಗುತ್ತದೆ. ತಂಡದ ಆಡಳಿತ ಮಂಡಳಿಯ ಆ ನಿರ್ಧಾರವನ್ನು ಎಲ್ಲರೂ ಗೌರವಿಸಲೇಬೇಕಾಗುತ್ತದೆ. ನಮ್ಮ ಸರದಿಗಾಗಿ ಕಾಯಬೇಕಾಗುತ್ತದೆ. ಕಠಿಣ ಅಭ್ಯಾಸ ನಡೆಸಿ ಹೊಸ ಕೌಶಲಗಳನ್ನು ಕಲಿಯುವುದರ ಜೊತೆಗೆ ಅವುಗಳನ್ನು ಮೈಗೂಡಿಸಿಕೊಂಡು ಮುಂದಡಿ ಇಡಬೇಕಾಗುತ್ತದೆ’ ಎಂದು 18 ವರ್ಷದ ಆಟಗಾರ ಹೇಳಿದ್ದಾರೆ.</p>.<p><strong>ಗೆಲುವಿಗೆ ಅಡಿಗಲ್ಲು ಇಟ್ಟ ಧವನ್:</strong> ‘ಶಿಖರ್ ಧವನ್ ಅಮೋಘ ಆಟ ಆಡಿದರು. ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ ಅಡಿಗಲ್ಲು ಹಾಕಿದರು’ ಎಂದು ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>‘ತಂಡಕ್ಕೆ ಧವನ್, ಉತ್ತಮ ಆರಂಭ ನೀಡಿದರು. ‘ಪವರ್ ಫ್ಲೇ’ಯಲ್ಲೇ ತಂಡದ ಖಾತೆಗೆ 60ರನ್ ಜಮೆಯಾಗಿದ್ದರಿಂದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ಗಳು ಒತ್ತಡ ರಹಿತವಾಗಿ ಆಡಲು ಸಾಧ್ಯವಾಯಿತು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>