ಮುಂಬೈ: ಇದೇ ಜೂನ್ನಲ್ಲಿ ನಡೆ ಯಲಿರುವ ಐಸಿಸಿ ವಿಶ್ವಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯವನ್ನು ರದ್ದು ಮಾಡಬೇಕು ಎಂದು ಕ್ರಿಕೆಟ್ ಕ್ಲಬ್ ಆಫ್ ಇಂಡಿಯಾ (ಸಿಸಿಐ) ಕಾರ್ಯದರ್ಶಿ ಸುರೇಶ್ ಬಾಫಣಾ ಒತ್ತಾಯಿಸಿದ್ದಾರೆ.
‘ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಯೋಧರ ಮೇಲಿನ ಭಯೋತ್ಪಾದನಾ ದಾಳಿಗೆ ಪಾಕಿಸ್ತಾನ ಬೆಂಬಲ ನೀಡಿದೆ ಎಂಬ ಆರೋಪ ಇದೆ. ಈ ಕುರಿತು ಅಲ್ಲಿಯ ಪ್ರಧಾನಿ ಇಮ್ರಾನ್ ಖಾನ್ ಇದು ವರೆಗೆ ಪ್ರತಿಕ್ರಿಯಿಸಿಲ್ಲ. ಈ ದಾಳಿಯನ್ನು ಪ್ರತಿಭಟಿಸಿ ವಿಶ್ವಕಪ್ ಪಂದ್ಯವನ್ನು ರದ್ದುಗೊಳಿಸಬೇಕು’ ಎಂದು ಹೇಳಿದ್ದಾರೆ.