ತರೂರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ದೊಡ್ಡ ಗಣೇಶ್, '2016ರಲ್ಲಿ ಟೆಸ್ಟ್ನಲ್ಲಿ ತ್ರಿಶತಕ ಬಾರಿಸಿದ್ದ ಕರುಣ್ ನಾಯರ್ ಅವರನ್ನು ಕೆಲವರು ತಮ್ಮವರೆಂದು ವಾದಿಸಿದ್ದರು. ಆದರೆ, ಭಾರತ ತಂಡದಲ್ಲಿ ಅವರು ಸ್ಥಾನ ಕಳೆದುಕೊಂಡಾಗ ಸುಮ್ಮನಿದ್ದರು. ಈಗ ದೇವದತ್ತ ಹೆಸರಲ್ಲೂ ಅದೇ ನಡೆಯುತ್ತಿದೆ. ಅವರು ಕೇರಳ ಮೂಲದವರು ಎಂಬುದನ್ನು ಒಪ್ಪುತ್ತೇನೆ. ಆದರೆ ಕ್ರಿಕೆಟಿಗರಾಗಿ ಕರುಣ್ ಹಾಗೂ ದೇವದತ್ತ ಅವರನ್ನು ಬೆಳೆಸಿದ್ದರಲ್ಲಿ ಕೇರಳದ ಪಾತ್ರವೇನೂ ಇಲ್ಲ. ಅವರು ಕರ್ನಾಟಕದ ಹುಡುಗರು' ಎಂದಿದ್ದಾರೆ.