<p><strong>ಮುಂಬೈ:</strong> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಸ್ಥಾನಕ್ಕೆ ದೇವಜಿತ್ ಸೈಕಿಯಾ ಅವರು ಶನಿವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಪ್ರಭತೇಜ್ ಭಾಟಿಯಾ ಅವರು ಖಜಾಂಚಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸ್ಥಾನಗಳಿಗೆ ಇವರಿಬ್ಬರನ್ನು ಬಿಟ್ಟು ಬೇರೆ ನಾಮಪತ್ರ ಸಲ್ಲಿಕೆಯಾಗಿಲ್ಲ.</p>.<p>ಮಹಾರಾಷ್ಟ್ರದ ನೂತನ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿರುವ ಕಾರಣ ಆಶಿಷ್ ಶೆಲ್ಲಾರ್ ಅವರು ಬಿಸಿಸಿಐ ಖಜಾಂಚಿ ಸ್ಥಾನಕ್ಕೆ ತ್ಯಾಗಪತ್ರ ನೀಡಿದ್ದರು. ತೆರವಾದ ಈ ಸ್ಥಾನಕ್ಕೆ ಛತ್ತೀಸಗಢ ರಾಜ್ಯ ಕ್ರಿಕೆಟ್ ಸಂಘದ ಭಾಟಿಯಾ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಜಯ್ ಶಾ ಅವರು ಡಿಸೆಂಬರ್ ಒಂದರಂದು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗಿದ್ದು, ಸೈಕಿಯಾ ಅವರು ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಸೈಕಿಯಾ ಅವರನ್ನು ಹಂಗಾಮಿ ಕಾರ್ಯದರ್ಶಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.</p>.<p>ಬಿಸಿಸಿಐ ವೆಬ್ಸೈಟ್ನಲ್ಲಿ ಪ್ರಕಟವಾಗಿರುವ ಚುನಾವಣಾ ವೇಳಾಪಟ್ಟಿಯ ಪ್ರಕಾರ ಈ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಶನಿವಾರ ಸಂಜೆ 4 ಗಂಟೆಯವರೆಗೆ ಅವಕಾಶವಿತ್ತು. ಮೂಲಗಳು ಪ್ರಕಾರ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕಾರ್ಯದರ್ಶಿ ಸ್ಥಾನಕ್ಕೆ ದೇವಜಿತ್ ಸೈಕಿಯಾ ಅವರು ಶನಿವಾರ ನಾಮಪತ್ರ ಸಲ್ಲಿಸಿದರು. ಇದೇ ವೇಳೆ ಪ್ರಭತೇಜ್ ಭಾಟಿಯಾ ಅವರು ಖಜಾಂಚಿ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸ್ಥಾನಗಳಿಗೆ ಇವರಿಬ್ಬರನ್ನು ಬಿಟ್ಟು ಬೇರೆ ನಾಮಪತ್ರ ಸಲ್ಲಿಕೆಯಾಗಿಲ್ಲ.</p>.<p>ಮಹಾರಾಷ್ಟ್ರದ ನೂತನ ಸಚಿವ ಸಂಪುಟದಲ್ಲಿ ಕ್ಯಾಬಿನೆಟ್ ಸಚಿವರಾಗಿರುವ ಕಾರಣ ಆಶಿಷ್ ಶೆಲ್ಲಾರ್ ಅವರು ಬಿಸಿಸಿಐ ಖಜಾಂಚಿ ಸ್ಥಾನಕ್ಕೆ ತ್ಯಾಗಪತ್ರ ನೀಡಿದ್ದರು. ತೆರವಾದ ಈ ಸ್ಥಾನಕ್ಕೆ ಛತ್ತೀಸಗಢ ರಾಜ್ಯ ಕ್ರಿಕೆಟ್ ಸಂಘದ ಭಾಟಿಯಾ ನಾಮಪತ್ರ ಸಲ್ಲಿಸಿದ್ದಾರೆ.</p>.<p>ಜಯ್ ಶಾ ಅವರು ಡಿಸೆಂಬರ್ ಒಂದರಂದು ಐಸಿಸಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿಸಿಸಿಐ ಕಾರ್ಯದರ್ಶಿ ಸ್ಥಾನ ತೆರವಾಗಿದ್ದು, ಸೈಕಿಯಾ ಅವರು ಹಂಗಾಮಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಅವರು ಸೈಕಿಯಾ ಅವರನ್ನು ಹಂಗಾಮಿ ಕಾರ್ಯದರ್ಶಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಿದ್ದರು.</p>.<p>ಬಿಸಿಸಿಐ ವೆಬ್ಸೈಟ್ನಲ್ಲಿ ಪ್ರಕಟವಾಗಿರುವ ಚುನಾವಣಾ ವೇಳಾಪಟ್ಟಿಯ ಪ್ರಕಾರ ಈ ಎರಡು ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಶನಿವಾರ ಸಂಜೆ 4 ಗಂಟೆಯವರೆಗೆ ಅವಕಾಶವಿತ್ತು. ಮೂಲಗಳು ಪ್ರಕಾರ ಬೇರೆ ಯಾರೂ ನಾಮಪತ್ರ ಸಲ್ಲಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>