ಕೇರಳ ವಿರುದ್ಧ ಸೋಮವಾರ ನಡೆದ ಪಂದ್ಯದಲ್ಲಿ ದೇವದತ್ತ ಪಡಿಕ್ಕಲ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಪ್ರಸ್ತುತ ಸರಣಿಯಲ್ಲಿ ಇದು ಅವರ ನಾಲ್ಕನೇ ಸೆಂಚುರಿಯಾಗಿದೆ. ಕಳೆದ ವರ್ಷ ಐಪಿಎಲ್ ಕ್ರಿಕೆಟ್ ಪಂದ್ಯಾಟದ ಮೂಲಕ ಬೆಳಕಿಗೆ ಬಂದಿರುವ ಕ್ರಿಕೆಟ್ ಪ್ರತಿಭೆ ಪಡಿಕ್ಕಲ್, ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ರಾಜ್ಯ ತಂಡದ ಗೆಲುವಿಗೆ ಕಾರಣರಾಗಿದ್ದಾರೆ.