<p>ಕರ್ನಾಟಕ ಕ್ರಿಕೆಟ್ ತಂಡದ ತಾರಾ ಬ್ಯಾಟರ್ ದೇವದತ್ತ ಪಡಿಕ್ಕಲ್ ಅವರು ದೇಶೀಯ ಕ್ರಿಕೆಟ್ನಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ. ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ 5 ಪಂದ್ಯಗಳಲ್ಲಿ 4 ಶತಕ ಸಿಡಿಸುವ ಮೂಲಕ ಭಾರತ ತಂಡದ ಆಯ್ಕೆ ಸಮಿತಿಯ ಗಮನಸೆಳೆದಿದ್ದಾರೆ. </p><p>ಅಹಮದಾಬಾದ್ನ ನರೇಂಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ತ್ರಿಪುರ ವಿರುದ್ಧದ ಗ್ರೂಪ್ ಹಂತದ 5ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಕೇಲವ 6 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಧೃತಿಗೆಡದ ಪಡಿಕ್ಕಲ್ ಅವರು ತಾಳ್ಮೆಯ ಇನಿಂಗ್ಸ್ ಕಟ್ಟಿದರು. </p><p>ಅವರು ನಾಲ್ಕನೇ ವಿಕೆಟ್ಗೆ ಸ್ಮರಣ್ ರವಿಚಂದ್ರನ್ (60 ರನ್) ಜೊತೆ ಸೇರಿ 132 ರನ್ಗಳ ಜೊತೆಯಾಟ ಆಡುವ ಮೂಲಕ ಕರ್ನಾಟಕ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಸ್ಮರಣ್ ಅವರು ಔಟ್ ಆದ ನಂತರವೂ ಅಬ್ಬರಿಸಿದ ಪಡಿಕ್ಕಲ್ ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿ 13ನೇ ಶತಕ ಸಿಡಿಸಿ ಮಿಂಚಿದರು. ಮಾತ್ರವಲ್ಲ, 2025–26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಳೆದ 5 ಇನಿಂಗ್ಸ್ಗಳಲ್ಲಿ 4ನೇ ಶತಕ ಸಿಡಿಸಿದ ಸಾಧನೆ ಮಾಡಿದರು. </p>.<p><strong>ಕಳೆದ 5 ಇನಿಂಗ್ಸ್ಗಳಲ್ಲಿ ಪಡಿಕ್ಕಲ್ ಬ್ಯಾಟಿಂಗ್</strong></p><ul><li><p>ಜಾರ್ಖಂಡ್ ವಿರುದ್ಧ 147 ರನ್</p></li><li><p>ಕೇರಳ ವಿರುದ್ಧ 124 ರನ್</p></li><li><p>ತಮಿಳುನಾಡು ವಿರುದ್ಧ 22 ರನ್</p></li><li><p>ಪಾಂಡಿಚೇರಿ ವಿರುದ್ಧ 113 ರನ್ </p></li><li><p>ತ್ರಿಪುರ ವಿರುದ್ಧ 108 ರನ್</p></li></ul><p>ಅದ್ಭುತ ಲಯದಲ್ಲಿರುವ ಪಡಿಕ್ಕಲ್ ಅವರು ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕರ್ನಾಟಕ ಕ್ರಿಕೆಟ್ ತಂಡದ ತಾರಾ ಬ್ಯಾಟರ್ ದೇವದತ್ತ ಪಡಿಕ್ಕಲ್ ಅವರು ದೇಶೀಯ ಕ್ರಿಕೆಟ್ನಲ್ಲಿ ತಮ್ಮ ಅಮೋಘ ಲಯವನ್ನು ಮುಂದುವರೆಸಿದ್ದಾರೆ. ಸದ್ಯ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯ 5 ಪಂದ್ಯಗಳಲ್ಲಿ 4 ಶತಕ ಸಿಡಿಸುವ ಮೂಲಕ ಭಾರತ ತಂಡದ ಆಯ್ಕೆ ಸಮಿತಿಯ ಗಮನಸೆಳೆದಿದ್ದಾರೆ. </p><p>ಅಹಮದಾಬಾದ್ನ ನರೇಂಂದ್ರ ಮೋದಿ ಕ್ರೀಡಾಂಗಣದಲ್ಲಿ ಆರಂಭವಾಗಿರುವ ತ್ರಿಪುರ ವಿರುದ್ಧದ ಗ್ರೂಪ್ ಹಂತದ 5ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಕೇಲವ 6 ರನ್ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಧೃತಿಗೆಡದ ಪಡಿಕ್ಕಲ್ ಅವರು ತಾಳ್ಮೆಯ ಇನಿಂಗ್ಸ್ ಕಟ್ಟಿದರು. </p><p>ಅವರು ನಾಲ್ಕನೇ ವಿಕೆಟ್ಗೆ ಸ್ಮರಣ್ ರವಿಚಂದ್ರನ್ (60 ರನ್) ಜೊತೆ ಸೇರಿ 132 ರನ್ಗಳ ಜೊತೆಯಾಟ ಆಡುವ ಮೂಲಕ ಕರ್ನಾಟಕ ತಂಡವನ್ನು ಕುಸಿತದಿಂದ ಪಾರು ಮಾಡಿದರು. ಸ್ಮರಣ್ ಅವರು ಔಟ್ ಆದ ನಂತರವೂ ಅಬ್ಬರಿಸಿದ ಪಡಿಕ್ಕಲ್ ಲಿಸ್ಟ್ ಎ ಏಕದಿನ ಕ್ರಿಕೆಟ್ನಲ್ಲಿ 13ನೇ ಶತಕ ಸಿಡಿಸಿ ಮಿಂಚಿದರು. ಮಾತ್ರವಲ್ಲ, 2025–26ನೇ ಸಾಲಿನ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಳೆದ 5 ಇನಿಂಗ್ಸ್ಗಳಲ್ಲಿ 4ನೇ ಶತಕ ಸಿಡಿಸಿದ ಸಾಧನೆ ಮಾಡಿದರು. </p>.<p><strong>ಕಳೆದ 5 ಇನಿಂಗ್ಸ್ಗಳಲ್ಲಿ ಪಡಿಕ್ಕಲ್ ಬ್ಯಾಟಿಂಗ್</strong></p><ul><li><p>ಜಾರ್ಖಂಡ್ ವಿರುದ್ಧ 147 ರನ್</p></li><li><p>ಕೇರಳ ವಿರುದ್ಧ 124 ರನ್</p></li><li><p>ತಮಿಳುನಾಡು ವಿರುದ್ಧ 22 ರನ್</p></li><li><p>ಪಾಂಡಿಚೇರಿ ವಿರುದ್ಧ 113 ರನ್ </p></li><li><p>ತ್ರಿಪುರ ವಿರುದ್ಧ 108 ರನ್</p></li></ul><p>ಅದ್ಭುತ ಲಯದಲ್ಲಿರುವ ಪಡಿಕ್ಕಲ್ ಅವರು ಜನವರಿ 11ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗುತ್ತಾರಾ? ಎಂಬುದನ್ನು ಕಾದು ನೋಡಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>