ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ನಲ್ಲಿ ಮಿಂಚಿದರಷ್ಟೇ ಧೋನಿಗೆ ಅವಕಾಶ

Last Updated 9 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ರಾಜ್‌ಕೋಟ್: ಇಂಡಿಯನ್‌ ಪ್ರೀಮಿಯರ್ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಟೂರ್ನಿಯಲ್ಲಿ ಸಾಮರ್ಥ್ಯ ತೋರಿದರೆ ಮಾತ್ರ ಮಹೇಂದ್ರ ಸಿಂಗ್ ಧೋನಿ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗುವುದು ಎಂಬ ನಿರ್ಧಾರಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಬಂದಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಸುನಿಲ್ ಜೋಶಿ ಅವರನ್ನು ಕಳೆದ ವಾರವಷ್ಟೇ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಭಾನುವಾರ ಸಭೆ ಸೇರಿದ ಸಮಿತಿ ದಕ್ಷಿಣ ಆಫ್ರಿಕಾ ಎದುರಿನ ಏಕದಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿತ್ತು. ಧೋನಿ ಅವರನ್ನು ಕೈಬಿಡುವ ಮೂಲಕ ಆಯ್ಕೆ ಸಮಿತಿ ಬದಲಾದರೂ ಧೋನಿ ಕುರಿತ ನಿರ್ಧಾರ ಬದಲಾಗಲಿಲ್ಲ ಎಂಬುದನ್ನು ಸಾಬೀತು ಮಾಡಿತ್ತು.

‘ಧೋನಿ ಬಗ್ಗೆ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ. ಐಪಿಎಲ್‌ನಲ್ಲಿ ಉತ್ತಮವಾಗಿ ಆಡಿದರೆ ಮಾತ್ರ ಅವರ ಮುಂದಿನ ಹಾದಿ ಸುಗಮವಾಗಲಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT