‘ಐಪಿಎಲ್ ಮತ್ತು ಸಿಎಸ್ಕೆ ತಂಡದಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟಿಗನ ಕನಸಾಗಿರುತ್ತದೆ. ಆರಂಭದಲ್ಲಿ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಳ್ಳಬೇಕೆಂಬ ಹಂಬಲ ನನ್ನಲ್ಲಿತ್ತು. ಧೋನಿ, ಮ್ಯಾಥ್ಯೂ ಹೇಡನ್ ಮತ್ತು ಮುತ್ತಯ್ಯ ಮುರಳೀಧರನ್ ಅವರಿಗೆ ನನ್ನ ಪರಿಚಯವೇ ಇರಲಿಲ್ಲ. ನಾನು ಯಾರು, ನನ್ನ ಸಾಮರ್ಥ್ಯವೇನು ಎಂಬುದನ್ನು ಅವರಿಗೆ ತೋರಿಸಬೇಕೆಂದು ನಿಶ್ಚಯಿಸಿದ್ದೆ. ತಂಡದಲ್ಲಿ ಮುರಳೀಧರನ್ಗೆ ಹೆಚ್ಚು ಪ್ರಾಶಸ್ತ್ಯ ಸಿಗುತ್ತಿತ್ತು. ಒಂದಲ್ಲ ಒಂದು ದಿನ ಅವರನ್ನು ಹಿಂದಿಕ್ಕಿ ಆಡುವ ಬಳಗದಲ್ಲಿ ಸ್ಥಾನ ಪಡೆಯಬೇಕೆಂಬ ಆಲೋಚನೆಯೂ ಮೂಡಿತ್ತು’ ಎಂದು ಅವರು ತಿಳಿಸಿದ್ದಾರೆ.