ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಧೋನಿ ತಂಡದಲ್ಲಿದ್ದಾಗ ಭಯ ಪಡುವ ಅಗತ್ಯವಿಲ್ಲ’

Last Updated 2 ಮೇ 2019, 19:45 IST
ಅಕ್ಷರ ಗಾತ್ರ

ಚೆನ್ನೈ: ‘ಮಹೇಂದ್ರ ಸಿಂಗ್‌ ಧೋನಿಯ ಸ್ಥಾನವನ್ನು ಯಾರಿಂದಲೂ ತುಂಬಲು ಸಾಧ್ಯವಿಲ್ಲ. ಅವರು ತಂಡದಲ್ಲಿದ್ದರೆ ನಮಗೆ ಆನೆ ಬಲ ಬಂದಂತಾಗುತ್ತದೆ. ಏಕಾಂಗಿಯಾಗಿ ಪಂದ್ಯ ಗೆದ್ದುಕೊಡಬಲ್ಲ ಸಾಮರ್ಥ್ಯ ಅವರಲ್ಲಿದೆ’ ಎಂದು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಆಟಗಾರ ಸುರೇಶ್‌ ರೈನಾ, ಧೋನಿ ಅವರ ಗುಣಗಾನ ಮಾಡಿದ್ದಾರೆ.

‘ಧೋನಿ ತಂಡದಲ್ಲಿದ್ದರೆ ನಮಗೆ ಯಾರ ಭಯವೂ ಇರುವುದಿಲ್ಲ. ಅವರ ಅನುಪಸ್ಥಿತಿಯಲ್ಲಿ ಇಡೀ ತಂಡವೇ ಸೊರಗಿಬಿಡುತ್ತದೆ. ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಮುಂಬೈ ಇಂಡಿಯನ್ಸ್‌ ಎದುರಿನ ಪಂದ್ಯಗಳಲ್ಲಿ ಸೋತಿದ್ದು ಇದಕ್ಕೆ ಸಾಕ್ಷಿ’ ಎಂದಿದ್ದಾರೆ.

‘ಮಹಿ ಕ್ರೀಸ್‌ಗೆ ಬಂದರೆ ಎದುರಾಳಿ ತಂಡದ ಮೇಲೆ ಹೆಚ್ಚು ಒತ್ತಡ ಬೀಳುತ್ತದೆ. ಹಿಂದಿನ ಪಂದ್ಯಗಳಲ್ಲಿ ಅದು ಸಾಬೀತಾಗಿದೆ. ತಂಡ ಸಂಕಷ್ಟದಲ್ಲಿದ್ದಾಗ ಅವರು ಎಲ್ಲಾ ಆಟಗಾರರಲ್ಲೂ ಚೈತನ್ಯ ತುಂಬುತ್ತಾರೆ’ ಎಂದು ತಿಳಿಸಿದ್ದಾರೆ.

‘ಡೆಲ್ಲಿ ಎದುರಿನ ಪಂದ್ಯದಲ್ಲಿ ಧೋನಿ, ಶ್ರೇಯಸ್‌ ಅಯ್ಯರ್‌ ಮತ್ತು ಕ್ರಿಸ್‌ ಮೊರಿಸ್‌ ಅವರನ್ನು ಸ್ಟಂಪಿಂಗ್‌ ಮೂಲಕ ಔಟ್‌ ಮಾಡಿದ್ದ ಮಾಡಿದ ರೀತಿ ಮೆಚ್ಚುವಂತಹದ್ದು. ಅವರ ಆ ಚುರುಕುತನ ಕಂಡು ನಿಜಕ್ಕೂ ಅಚ್ಚರಿಯಾಗುತ್ತದೆ. ಆ ಎರಡು ಸ್ಟಂಪಿಂಗ್‌ನಿಂದಾಗಿ ನಮ್ಮ ಗೆಲುವು ಸುಲಭವಾಯಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT