ಈ ಕುರಿತು ಮಾಹಿತಿ ನೀಡಿರುವ ಅವರ ಬಾಲ್ಯದ ಗೆಳೆಯ ಮತ್ತು ವ್ಯವಸ್ಥಾಪಕ ಮಿಹಿರ್ ದಿವಾಕರ್, ’ದೇಶಭಕ್ತಿಯು ಧೋನಿಯ ರಕ್ತದಲ್ಲಿಯೇ ಇದೆ. ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು ಗೌರವ ಹುದ್ದೆಗೆ ಗೌರವ ನೀಡಿದ್ದರು. ಅವರಿಗೆ ಮೊದಲಿನಿಂದಲೂ ಕೃಷಿಯ ಮೇಲೆ ಒಲವಿತ್ತು. ಈಗ ತಮ್ಮದೇ 40–50 ಎಕರೆ ಭೂಮಿಯಲ್ಲಿ ಸಾವಯವ ತೋಟ ಮಾಡುವತ್ತ ಹೆಜ್ಜೆಯಿಟ್ಟಿದ್ದಾರೆ. ಪಪ್ಪಾಯ, ಬಾಳೆಹಣ್ಣು ಬೆಳೆಯುತ್ತಿದ್ದಾರೆ‘ ಎಂದಿದ್ದಾರೆ.