‘ಚೆನ್ನೈ ವಿರುದ್ಧದ ಹೋರಾಟದಲ್ಲಿ ಕೇವಲ 99ರನ್ಗಳಿಗೆ ಆಲೌಟ್ ಆಗುತ್ತೇವೆ ಎಂದು ಖಂಡಿತವಾಗಿಯೂ ಭಾವಿಸಿರಲಿಲ್ಲ. ಕಗಿಸೊ ರಬಾಡ ಶ್ರೇಷ್ಠ ಬೌಲರ್. ‘ಡೆತ್ ಓವರ್’ಗಳಲ್ಲಿ ಪರಿಣಾಮಕಾರಿಯಾಗಿ ಬೌಲಿಂಗ್ ಮಾಡುವ ಕಲೆ ಕರಗತ ಮಾಡಿಕೊಂಡಿದ್ದಾರೆ. ಅವರ ಅನುಪಸ್ಥಿತಿ ತುಂಬಾ ಕಾಡಿತು. ಲೀಗ್ ಹಂತದಲ್ಲಿ ಇನ್ನೊಂದು ಪಂದ್ಯ ಆಡಬೇಕಿದ್ದು ಅದರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ ಎರಡರೊಳಗೆ ಸ್ಥಾನ ಕಾಪಾಡಿಕೊಳ್ಳಲು ಪ್ರಯತ್ನಿಸುತ್ತೇವೆ’ ಎಂದು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್ ಹೇಳಿದರು.