ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎದುರಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ದೊಡ್ಡ ಮೊತ್ತ ಪೇರಿಸಿತ್ತು. ಆದರೆ ಚೆನ್ನೈ ಬೌಲರ್ಗಳು ಉತ್ತಮವಾಗಿ ಬೌಲಿಂಗ್ ಮಾಡಿರಲಿಲ್ಲ. ಇದರಿಂದಾಗಿ ಚೆನ್ನೈ ತಂಡವು ಪ್ರಯಾಸದ ಜಯ ಸಾಧಿಸಿತು.
‘ವೈಡ್ ಮತ್ತು ನೋಬಾಲ್ಗಳನ್ನು ಕಡಿಮೆ ಮಾಡಬೇಕು. ರನ್ಗಳನ್ನು ಬಿಟ್ಟುಕೊಡಬಾರದು. ಬಿಗಿ ದಾಳಿ ನಡೆಸಬೇಕು ಎಂದು ಧೋನಿ ಈ ಹಿಂದೆಯೇ ತಮ್ಮ ಬೌಲರ್ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಆದರೂ ಯುವ ಬೌಲರ್ಗಳು ಕಳಪೆ ಬೌಲಿಂಗ್ ಮಾಡಿದ್ದಾರೆ. ವೈಡ್ಗಳನ್ನು ಹೆಚ್ಚು ಹಾಕಿದ್ದಾರೆ. ಇದೇ ರೀತಿ ಮುಂದುವರಿದರೆ ನಾಯಕ ಧೋನಿ ಮುಂದೊಂದು ದಿನ ಆಮಾನತು ಶಿಕ್ಷೆಗೊಳಗಾಗಬಹುದು’ ಎಂದು ಸೆಹ್ವಾಗ್ ಕಳವಳ ವ್ಯಕ್ತಪಡಿಸಿದ್ದಾರೆ.