‘ತಂಡದ ಆಯ್ಕೆಯ ಬಗ್ಗೆ ಪ್ರಶ್ನಿಸುವುದು ಸರಿಯಲ್ಲ. ಆಸ್ಟ್ರೇಲಿಯಾ ಎದುರಿನ ಪುರುಷರ ಟ್ವೆಂಟಿ–20 ಸರಣಿಯ ಮೊದಲ ಪಂದ್ಯದಲ್ಲಿ ದುಬಾರಿಯಾಗಿದ್ದ ಕೃಣಾಲ್ ಪಾಂಡ್ಯ ಅವರಿಗೆ ಮತ್ತೂ ಅವಕಾಶ ಕೊಡಲಾಯಿತು. ಕೊನೆಯ ಪಂದ್ಯದಲ್ಲಿ ಅವರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಇವೆಲ್ಲ ಕ್ರಿಕೆಟ್ನಲ್ಲಿ ಸಾಮಾನ್ಯ. ಯಾರನ್ನು ಆಡಿಸಬೇಕು, ಯಾರು ಬೇಡ ಎಂಬುದನ್ನು ನಿರ್ಧರಿಸುವ ಹಕ್ಕು ತಂಡದ ಆಡಳಿತಕ್ಕೆ ಇದೆ’ ಎಂದು ಅವರು ವಿವರಿಸಿದರು.