<p><strong>ಕೋಲ್ಕತ್ತ :</strong> ಟ್ವೆಂಟಿ–20 ಅಭ್ಯಾಸ ಪಂದ್ಯದ ವೇಳೆ ಬಂಗಾಳ ತಂಡದ ವೇಗದ ಬೌಲರ್ ಅಶೋಕ್ ದಿಂಡಾ ಅವರ ಹಣೆಗೆ ಚೆಂಡು ಬಡಿದಿದೆ.</p>.<p>ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆದ ಪಂದ್ಯದ ವೇಳೆ ಬೀರೇಂದರ್ ವಿವೇಕ್ ಸಿಂಗ್ ಅವರ ನೇರ ಹೊಡೆತದಲ್ಲಿ ಚೆಂಡನ್ನು ಹಿಡಿತಕ್ಕೆ ಪಡೆಯಲು (ಕಾಟ್ ಆ್ಯಂಡ್ ಬೋಲ್ಡ್) ದಿಂಡಾ ಪ್ರಯತ್ನಿಸಿದರು. ಈ ವೇಳೆ ಅವರ ಕೈಗೆ ಬಡಿದ ಚೆಂಡು ರಭಸವಾಗಿ ಬಂದು ಹಣೆಗೆ ತಾಗಿತು. ತಾವು ಹಾಕಿದ ಆ ಓವರ್ ಮುಗಿದ ಕೂಡಲೇ ಡ್ರೆಸಿಂಗ್ ಕೊಠಡಿಗೆ ವಾಪಸಾದ ಅವರನ್ನು ಸಿ.ಟಿ.ಸ್ಕ್ಯಾನ್ಗೆ ಒಳಪಡಿಸಲಾಯಿತು.</p>.<p>‘ದಿಂಡಾ ಅವರ ಹಣೆಗೆ ಗಂಭೀರವಾದ ಪೆಟ್ಟು ಬಿದ್ದಿಲ್ಲ ಎಂಬುದು ಸ್ಕ್ಯಾನಿಂಗ್ನಿಂದ ಖಾತರಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರಿಗೆ ಎರಡು ದಿನ ವಿಶ್ರಾಂತಿ ನೀಡಲಾಗಿದೆ’ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಂಗಾಳ ತಂಡ ಈ ಬಾರಿಯ ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಮಿಜೋರಾಂ ಎದುರು ಸೆಣಸಲಿದೆ. ‘ಡಿ’ ಗುಂಪಿನ ಈ ಹೋರಾಟ ಫೆಬ್ರುವರಿ 21ರಂದು ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ :</strong> ಟ್ವೆಂಟಿ–20 ಅಭ್ಯಾಸ ಪಂದ್ಯದ ವೇಳೆ ಬಂಗಾಳ ತಂಡದ ವೇಗದ ಬೌಲರ್ ಅಶೋಕ್ ದಿಂಡಾ ಅವರ ಹಣೆಗೆ ಚೆಂಡು ಬಡಿದಿದೆ.</p>.<p>ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆದ ಪಂದ್ಯದ ವೇಳೆ ಬೀರೇಂದರ್ ವಿವೇಕ್ ಸಿಂಗ್ ಅವರ ನೇರ ಹೊಡೆತದಲ್ಲಿ ಚೆಂಡನ್ನು ಹಿಡಿತಕ್ಕೆ ಪಡೆಯಲು (ಕಾಟ್ ಆ್ಯಂಡ್ ಬೋಲ್ಡ್) ದಿಂಡಾ ಪ್ರಯತ್ನಿಸಿದರು. ಈ ವೇಳೆ ಅವರ ಕೈಗೆ ಬಡಿದ ಚೆಂಡು ರಭಸವಾಗಿ ಬಂದು ಹಣೆಗೆ ತಾಗಿತು. ತಾವು ಹಾಕಿದ ಆ ಓವರ್ ಮುಗಿದ ಕೂಡಲೇ ಡ್ರೆಸಿಂಗ್ ಕೊಠಡಿಗೆ ವಾಪಸಾದ ಅವರನ್ನು ಸಿ.ಟಿ.ಸ್ಕ್ಯಾನ್ಗೆ ಒಳಪಡಿಸಲಾಯಿತು.</p>.<p>‘ದಿಂಡಾ ಅವರ ಹಣೆಗೆ ಗಂಭೀರವಾದ ಪೆಟ್ಟು ಬಿದ್ದಿಲ್ಲ ಎಂಬುದು ಸ್ಕ್ಯಾನಿಂಗ್ನಿಂದ ಖಾತರಿಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರಿಗೆ ಎರಡು ದಿನ ವಿಶ್ರಾಂತಿ ನೀಡಲಾಗಿದೆ’ ಎಂದು ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಂಗಾಳ ತಂಡ ಈ ಬಾರಿಯ ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ–20 ಕ್ರಿಕೆಟ್ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಮಿಜೋರಾಂ ಎದುರು ಸೆಣಸಲಿದೆ. ‘ಡಿ’ ಗುಂಪಿನ ಈ ಹೋರಾಟ ಫೆಬ್ರುವರಿ 21ರಂದು ಕಟಕ್ನ ಬಾರಾಬತಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>