<p><strong>ಬೆಂಗಳೂರು</strong>: ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿಯನ್ನು ಖರೀದಿಸುತ್ತೇನೆ ಎಂಬ ವದಂತಿಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಹುಚ್ಚನಲ್ಲ ಎಂದಿದ್ದಾರೆ.</p><p>ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಕುರಿತ ವದಂತಿಗಳಿಗೆ ದೆಹಲಿಯಲ್ಲಿ ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ನಾನು ರಾಯಲ್ ಚಾಲೆಂಜ್ ವಿಸ್ಕಿ ಕುಡಿಯಲ್ಲ. ನನಗೇಕೆ ಆರ್ಸಿಬಿ ತಂಡ ಬೇಕು’ ಎಂದು ಪ್ರಶ್ನಿಸಿದರು. </p><p><br>ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಶಿವಕುಮಾರ್, ‘ಕೆಎಸ್ಸಿಎ ಆಡಳಿತ ಮಂಡಳಿಯ ಭಾಗವಾಗಲು ತಮಗೆ ಆಫರ್ಗಳು ಬಂದಿವೆ. ಆದರೆ, ಇದಕ್ಕೆ ನನ್ನ ಬಳಿ ಸಮಯವಿಲ್ಲ. ನನ್ನ ಶಿಕ್ಷಣ ಸಂಸ್ಥೆಯನ್ನು ನೋಡಿಕೊಳ್ಳಲು ನಮ್ಮ ಕುಟುಂಬದ ಸದಸ್ಯರಿಗೆ ಬಿಟ್ಟಿದ್ದೇನೆ’ ಎಂದು ಹೇಳಿದ್ದಾರೆ.</p>. <p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂನ್ 4ರಂದು ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು.</p><p>ಕ್ರೀಡಾಂಗಣದ ಒಳಗೆ ಆರ್ಸಿಬಿ ಆಟಗಾರರ ಜೊತೆ ಕಾಣಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್, ಟ್ರೋಫಿ ಎತ್ತಿ ಹಿಡಿದು, ಮುತ್ತಿಟ್ಟು ಸಂಭ್ರಮಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐಪಿಎಲ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫ್ರಾಂಚೈಸಿಯನ್ನು ಖರೀದಿಸುತ್ತೇನೆ ಎಂಬ ವದಂತಿಗಳ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, ನಾನು ಹುಚ್ಚನಲ್ಲ ಎಂದಿದ್ದಾರೆ.</p><p>ಆರ್ಸಿಬಿ ಫ್ರಾಂಚೈಸಿಯನ್ನು ಖರೀದಿಸುವ ಕುರಿತ ವದಂತಿಗಳಿಗೆ ದೆಹಲಿಯಲ್ಲಿ ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ‘ನಾನು ರಾಯಲ್ ಚಾಲೆಂಜ್ ವಿಸ್ಕಿ ಕುಡಿಯಲ್ಲ. ನನಗೇಕೆ ಆರ್ಸಿಬಿ ತಂಡ ಬೇಕು’ ಎಂದು ಪ್ರಶ್ನಿಸಿದರು. </p><p><br>ಈ ಕುರಿತಂತೆ ಎಎನ್ಐ ಜೊತೆ ಮಾತನಾಡಿದ ಶಿವಕುಮಾರ್, ‘ಕೆಎಸ್ಸಿಎ ಆಡಳಿತ ಮಂಡಳಿಯ ಭಾಗವಾಗಲು ತಮಗೆ ಆಫರ್ಗಳು ಬಂದಿವೆ. ಆದರೆ, ಇದಕ್ಕೆ ನನ್ನ ಬಳಿ ಸಮಯವಿಲ್ಲ. ನನ್ನ ಶಿಕ್ಷಣ ಸಂಸ್ಥೆಯನ್ನು ನೋಡಿಕೊಳ್ಳಲು ನಮ್ಮ ಕುಟುಂಬದ ಸದಸ್ಯರಿಗೆ ಬಿಟ್ಟಿದ್ದೇನೆ’ ಎಂದು ಹೇಳಿದ್ದಾರೆ.</p>. <p>ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಜೂನ್ 4ರಂದು ನಡೆದ ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು.</p><p>ಕ್ರೀಡಾಂಗಣದ ಒಳಗೆ ಆರ್ಸಿಬಿ ಆಟಗಾರರ ಜೊತೆ ಕಾಣಿಸಿಕೊಂಡಿದ್ದ ಡಿ.ಕೆ. ಶಿವಕುಮಾರ್, ಟ್ರೋಫಿ ಎತ್ತಿ ಹಿಡಿದು, ಮುತ್ತಿಟ್ಟು ಸಂಭ್ರಮಿಸಿದ್ದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>