<p><strong>ದುಬೈ </strong>(ಪಿಟಿಐ): ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲಾರ್ಧದಲ್ಲಿ ನಾವೇನು ಸಾಧನೆ ಮಾಡಿದ್ದೆವು ಎನ್ನುವುದು ಮುಖ್ಯವಲ್ಲ. ಮುಂದಿನ ಹಂತದಲ್ಲಿ ಮಾಡುವ ಸಾಧನೆಯೇ ಮಹತ್ವದ್ದಾಗಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>ಭಾನುವಾರ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದ ಟೂರ್ನಿಯು ಆರಂಭವಾಗಲಿದೆ. ಕಳೆದ ಏಪ್ರಿಲ್–ಮೇನಲ್ಲಿ ಭಾರತದಲ್ಲಿ ಆಯೋಜನೆಗೊಂಡಿದ್ದ ಟೂರ್ನಿಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದರಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಟೂರ್ನಿಯ ಉಳಿದ ಭಾಗವು ನಡೆಯಲಿದೆ.</p>.<p>‘ಮೊದಲಾರ್ಧದ ಟೂರ್ನಿ ನಡೆದು ನಾಲ್ಕು ತಿಂಗಳುಗಳು ಗತಿಸಿವೆ. ಈ ಅವಧಿಯಲ್ಲಿ ಒಂದಿಷ್ಟು ಉತ್ತಮ ಕ್ರಿಕೆಟ್ ಆಡುವ ಅವಕಾಶ ಆಟಗಾರರಿಗೆ ಲಭಿಸಿದೆ. ಆದ್ದರಿಂದ ಈಗ ಉತ್ತಮ ಆರಂಭ ಮಾಡುವ ಭರವಸೆ ಇದೆ’ ಎಂದು ಪಾಂಟಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡೆಲ್ಲಿ ತಂಡವು ಮೊದಲಾರ್ಧದ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎಂಟು ಪಂದ್ಯಗಳನ್ನು ಆಡಿ ಆರರಲ್ಲಿ ಗೆದ್ದಿದೆ.</p>.<p>‘ಈ ಬಾರಿಯ ಪೂರ್ವಸಿದ್ಧತಾ ಶಿಬಿರದಲ್ಲಿ ತಂಡದ ಆಟಗಾರರು ಉತ್ತಮ ಸಾಮರ್ಥ್ಯ ತೋರಿದ್ದಾರೆ. ಅಲ್ಲದೇ ತಮ್ಮ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಉತ್ಸುಕರಾಗಿದ್ದಾರೆ. ತಂಡದೊಂದಿಗೆ ಕಾರ್ಯನಿರ್ವಹಿಸಲು ಹರ್ಷವೆನಿಸುತ್ತಿದೆ. ಇದು ವೃತ್ತಿಜೀವನದ ಸುಮಧುರ ಸಮಯಗಳಲ್ಲಿ ಒಂದು’ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಶ್ರೇಯಸ್ ಅಯ್ಯರ್ ಗಾಯದಿಂದ ಚೇತರಿಸಿಕೊಂಡು ಮರಳಿದ್ದಾರೆ. ತರಬೇತಿ ಶಿಬಿರದಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಅವರೊಬ್ಬ ವಿಶ್ವದರ್ಜೆಯ ಆಟಗಾರ. ಈ ಋತುವಿನಲ್ಲಿ ಹೆಚ್ಚು ರನ್ಗಳನ್ನು ಪೇರಿಸುವ ನಿರೀಕ್ಷೆ ಮೂಡಿಸಿದ್ದಾರೆ’ ಎಂದರು.</p>.<p>ಸೆ 22ರಂದು ಡೆಲ್ಲಿ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಅಭಿಯಾನ ಆರಂಭಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ </strong>(ಪಿಟಿಐ): ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲಾರ್ಧದಲ್ಲಿ ನಾವೇನು ಸಾಧನೆ ಮಾಡಿದ್ದೆವು ಎನ್ನುವುದು ಮುಖ್ಯವಲ್ಲ. ಮುಂದಿನ ಹಂತದಲ್ಲಿ ಮಾಡುವ ಸಾಧನೆಯೇ ಮಹತ್ವದ್ದಾಗಿದೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಹೇಳಿದ್ದಾರೆ.</p>.<p>ಭಾನುವಾರ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯ ದ್ವಿತೀಯಾರ್ಧದ ಟೂರ್ನಿಯು ಆರಂಭವಾಗಲಿದೆ. ಕಳೆದ ಏಪ್ರಿಲ್–ಮೇನಲ್ಲಿ ಭಾರತದಲ್ಲಿ ಆಯೋಜನೆಗೊಂಡಿದ್ದ ಟೂರ್ನಿಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿದ್ದರಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ)ನಲ್ಲಿ ಟೂರ್ನಿಯ ಉಳಿದ ಭಾಗವು ನಡೆಯಲಿದೆ.</p>.<p>‘ಮೊದಲಾರ್ಧದ ಟೂರ್ನಿ ನಡೆದು ನಾಲ್ಕು ತಿಂಗಳುಗಳು ಗತಿಸಿವೆ. ಈ ಅವಧಿಯಲ್ಲಿ ಒಂದಿಷ್ಟು ಉತ್ತಮ ಕ್ರಿಕೆಟ್ ಆಡುವ ಅವಕಾಶ ಆಟಗಾರರಿಗೆ ಲಭಿಸಿದೆ. ಆದ್ದರಿಂದ ಈಗ ಉತ್ತಮ ಆರಂಭ ಮಾಡುವ ಭರವಸೆ ಇದೆ’ ಎಂದು ಪಾಂಟಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>ಡೆಲ್ಲಿ ತಂಡವು ಮೊದಲಾರ್ಧದ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಎಂಟು ಪಂದ್ಯಗಳನ್ನು ಆಡಿ ಆರರಲ್ಲಿ ಗೆದ್ದಿದೆ.</p>.<p>‘ಈ ಬಾರಿಯ ಪೂರ್ವಸಿದ್ಧತಾ ಶಿಬಿರದಲ್ಲಿ ತಂಡದ ಆಟಗಾರರು ಉತ್ತಮ ಸಾಮರ್ಥ್ಯ ತೋರಿದ್ದಾರೆ. ಅಲ್ಲದೇ ತಮ್ಮ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಉತ್ಸುಕರಾಗಿದ್ದಾರೆ. ತಂಡದೊಂದಿಗೆ ಕಾರ್ಯನಿರ್ವಹಿಸಲು ಹರ್ಷವೆನಿಸುತ್ತಿದೆ. ಇದು ವೃತ್ತಿಜೀವನದ ಸುಮಧುರ ಸಮಯಗಳಲ್ಲಿ ಒಂದು’ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.</p>.<p>‘ಶ್ರೇಯಸ್ ಅಯ್ಯರ್ ಗಾಯದಿಂದ ಚೇತರಿಸಿಕೊಂಡು ಮರಳಿದ್ದಾರೆ. ತರಬೇತಿ ಶಿಬಿರದಲ್ಲಿ ಉತ್ತಮವಾಗಿ ಆಡುತ್ತಿದ್ದಾರೆ. ಅವರೊಬ್ಬ ವಿಶ್ವದರ್ಜೆಯ ಆಟಗಾರ. ಈ ಋತುವಿನಲ್ಲಿ ಹೆಚ್ಚು ರನ್ಗಳನ್ನು ಪೇರಿಸುವ ನಿರೀಕ್ಷೆ ಮೂಡಿಸಿದ್ದಾರೆ’ ಎಂದರು.</p>.<p>ಸೆ 22ರಂದು ಡೆಲ್ಲಿ ತಂಡವು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಅಭಿಯಾನ ಆರಂಭಿಸಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>