ದುಬೈಯಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಫೈನಲ್ ಪಂದ್ಯದ ಸಂದರ್ಭ ದ್ರಾವಿಡ್ ಬಿಸಿಸಿಐ ಪ್ರಮುಖರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಟಿ–20 ವಿಶ್ವಕಪ್ ಮುಗಿದ ಬಳಿಕ ಹಾಲಿ ಹೆಡ್ ಕೋಚ್ ರವಿಶಾಸ್ತ್ರಿ ಅವರ ಅವಧಿ ಕೊನೆಗೊಳ್ಳಲಿದ್ದು, ಆ ಸ್ಥಾನ ತುಂಬುವಂತೆ ಸೌರವ್ ಗಂಗೂಲಿ ಮತ್ತು ಜಯ್ ಶಾ ಅವರು ರಾಹುಲ್ ದ್ರಾವಿಡ್ ಅವರ ಮನವೊಲಿಸಿದ್ದಾರೆ’ ಎಂದು ತಿಳಿದು ಬಂದಿದೆ.