<p><strong>ನ್ಯೂಯಾರ್ಕ್</strong>: ಟಿ20 ವಿಶ್ವಕಪ್ ಟೂರ್ನಿ ಬಳಿಕ ಭಾರತದ ಕೋಚ್ ಹುದ್ದೆಯಿಂದ ಕೆಳಗಿಳಿಯುವುದಾಗಿ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ.</p>.<p>ದ್ರಾವಿಡ್ ಅವರ ಒಪ್ಪಂದವು ಈ ತಿಂಗಳ ಕೊನೆಯಲ್ಲಿ ಕೊನೆಗೊಳ್ಳುತ್ತದೆ. ಸುಮಾರು ಮೂರು ವರ್ಷದಿಂದ ತಂಡದ ತರಬೇತುದಾರಾಗಿದ್ದಾರೆ. ಅವರು ಕೋಚ್ ಹುದ್ದೆಗೆ ಮರು ಅರ್ಜಿ ಸಲ್ಲಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. </p>.<p>ಐರ್ಲೆಂಡ್ ವಿರುದ್ಧದ ಭಾರತದ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ 51 ವರ್ಷದ ರಾಹುಲ್, ‘ಇದು ನಾನು ಉಸ್ತುವಾರಿ ವಹಿಸುವ ಕೊನೆಯ ಟೂರ್ನಿಯಾಗಿದೆ’ ಎಂದು ಹೇಳಿದರು.</p>.<p>‘ದುರದೃಷ್ಟವಶಾತ್, ಬಿಡುವಿಲ್ಲದ ವೇಳಾಪಟ್ಟಿ ಇದೆ. ನನ್ನ ಜೀವನದ ಈ ಹಂತದಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಭಾವಿಸುವುದಿಲ್ಲ. ಭಾರತ ತಂಡಕ್ಕೆ ತರಬೇತಿ ನೀಡುವುದನ್ನು ಆನಂದಿಸಿದ್ದೇನೆ ಮತ್ತು ಇದು ನಿಜವಾಗಿಯೂ ವಿಶೇಷ ಕೆಲಸ’ ಎಂದರು.</p>.<p>2021ರ ಟಿ20 ವಿಶ್ವಕಪ್ ನಂತರ ಭಾರತದ ಮಾಜಿ ನಾಯಕ ರವಿ ಶಾಸ್ತ್ರಿ ಅವರಿಂದ ಅಧಿಕಾರ ವಹಿಸಿಕೊಂಡರು. </p>.<p>ಕಳೆದ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಮತ್ತು ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಎರಡರಲ್ಲೂ ಭಾರತ ತಂಡ ಫೈನಲ್ ತಲುಪಿತ್ತು. </p>.<p>‘ಪ್ರಾಮಾಣಿಕವಾಗಿ ಹೇಳುವುದಾದರೆ, ಈ ಟೂರ್ನಿಗಳಲ್ಲಿ ನಾವು ನಿಜವಾಗಿಯೂ ಉತ್ತಮವಾಗಿ ಆಡಿದ್ದೇವೆ ಎಂದು ಭಾವಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನ್ಯೂಯಾರ್ಕ್</strong>: ಟಿ20 ವಿಶ್ವಕಪ್ ಟೂರ್ನಿ ಬಳಿಕ ಭಾರತದ ಕೋಚ್ ಹುದ್ದೆಯಿಂದ ಕೆಳಗಿಳಿಯುವುದಾಗಿ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ.</p>.<p>ದ್ರಾವಿಡ್ ಅವರ ಒಪ್ಪಂದವು ಈ ತಿಂಗಳ ಕೊನೆಯಲ್ಲಿ ಕೊನೆಗೊಳ್ಳುತ್ತದೆ. ಸುಮಾರು ಮೂರು ವರ್ಷದಿಂದ ತಂಡದ ತರಬೇತುದಾರಾಗಿದ್ದಾರೆ. ಅವರು ಕೋಚ್ ಹುದ್ದೆಗೆ ಮರು ಅರ್ಜಿ ಸಲ್ಲಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ. </p>.<p>ಐರ್ಲೆಂಡ್ ವಿರುದ್ಧದ ಭಾರತದ ಆರಂಭಿಕ ಪಂದ್ಯಕ್ಕೆ ಮುಂಚಿತವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ 51 ವರ್ಷದ ರಾಹುಲ್, ‘ಇದು ನಾನು ಉಸ್ತುವಾರಿ ವಹಿಸುವ ಕೊನೆಯ ಟೂರ್ನಿಯಾಗಿದೆ’ ಎಂದು ಹೇಳಿದರು.</p>.<p>‘ದುರದೃಷ್ಟವಶಾತ್, ಬಿಡುವಿಲ್ಲದ ವೇಳಾಪಟ್ಟಿ ಇದೆ. ನನ್ನ ಜೀವನದ ಈ ಹಂತದಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಭಾವಿಸುವುದಿಲ್ಲ. ಭಾರತ ತಂಡಕ್ಕೆ ತರಬೇತಿ ನೀಡುವುದನ್ನು ಆನಂದಿಸಿದ್ದೇನೆ ಮತ್ತು ಇದು ನಿಜವಾಗಿಯೂ ವಿಶೇಷ ಕೆಲಸ’ ಎಂದರು.</p>.<p>2021ರ ಟಿ20 ವಿಶ್ವಕಪ್ ನಂತರ ಭಾರತದ ಮಾಜಿ ನಾಯಕ ರವಿ ಶಾಸ್ತ್ರಿ ಅವರಿಂದ ಅಧಿಕಾರ ವಹಿಸಿಕೊಂಡರು. </p>.<p>ಕಳೆದ ವರ್ಷ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಮತ್ತು ತವರಿನಲ್ಲಿ ನಡೆದ ಏಕದಿನ ವಿಶ್ವಕಪ್ ಎರಡರಲ್ಲೂ ಭಾರತ ತಂಡ ಫೈನಲ್ ತಲುಪಿತ್ತು. </p>.<p>‘ಪ್ರಾಮಾಣಿಕವಾಗಿ ಹೇಳುವುದಾದರೆ, ಈ ಟೂರ್ನಿಗಳಲ್ಲಿ ನಾವು ನಿಜವಾಗಿಯೂ ಉತ್ತಮವಾಗಿ ಆಡಿದ್ದೇವೆ ಎಂದು ಭಾವಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>