40ನೇ ಶಾರ್ಜಾ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಭಾಗವಹಿಸಿದ್ದ ಗಂಗೂಲಿ, ಮಾಧ್ಯಮಗಳೊಂದಿಗೆ ಮಾತನಾಡಿದರು.
‘ದ್ರಾವಿಡ್ ಅವರ ಮಗನಿಂದ ನನಗೆ ಕರೆಯೊಂದು ಬಂದಿದೆ. ಅವರು ಮನೆಯಲ್ಲಿ ತುಂಬಾ ಕಟ್ಟುನಿಟ್ಟಾಗಿ ವರ್ತಿಸುತ್ತಿದ್ದಾರಂತೆ. ಹೀಗಾಗಿ, ದ್ರಾವಿಡ್ಗೆ ಕರೆ ಮಾಡಿ, ನೀನು ಈಗ ರಾಷ್ಟ್ರೀಯ ತಂಡ ಸೇರಿಕೊಳ್ಳುವ ಸಮಯ ಎಂದು ತಿಳಿಸಿ, ಕೋಚ್ ಹುದ್ದೆ ವಹಿಸಿಕೊಳ್ಳುವಂತೆ ಹೇಳಿದೆ’ ಎಂದು ಗಂಗೂಲಿ ತಮಾಷೆ ಮಾಡಿದರು.