‘ಭಾರತ ಕ್ರಿಕೆಟ್ ದೇಶದ ಮೂಲೆ ಮೂಲೆಗೆ ಹಬ್ಬಿದೆ. ಮುಂಬೈ, ಕರ್ನಾಟಕದಂಥ ತಂಡಗಳು ಪ್ರಮುಖ ಟೂರ್ನಿಗಳಲ್ಲಿ ಆಧಿಪತ್ಯ ಸ್ಥಾಪಿಸಿವೆ. ಒಂದೆರಡು ವರ್ಷಗಳಲ್ಲಿ ವಿದರ್ಭದಂಥ ತಂಡಗಳು ಕೂಡ ಅತ್ಯುತ್ತಮ ಸಾಧನೆ ಮಾಡಿವೆ. ಇದು, ನಮ್ಮಲ್ಲಿ ಸ್ಪರ್ಧಾತ್ಮಕ ಕ್ರಿಕೆಟ್ ಬೆಳೆಯುತ್ತಿದೆ ಎಂಬುದನ್ನು ಸಾಬೀತು ಮಾಡಿದೆ. ಈಶಾನ್ಯ ರಾಜ್ಯಗಳ ತಂಡಗಳು ಕೂಡ ದೇಶಿ ಕ್ರಿಕೆಟ್ಗೆ ಸೇರಿದ್ದರಿಂದ ದೇಶಿ ಕ್ರಿಕೆಟ್ನ ಶಕ್ತಿ ಇನ್ನಷ್ಟು ಬಲವಾಗಿದೆ’ ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ ಹೇಳಿದರು.