<p><strong>ಕೊಯಮತ್ತೂರು:</strong> ಈ ಬಾರಿಯ ದುಲೀಪ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ತಂಡವು ದಕ್ಷಿಣ ವಲಯ ವಿರುದ್ಧ 294 ರನ್ ಅಂತರದ ಗೆಲುವು ದಾಖಲಿಸಿದೆ.</p>.<p>ಕೊಯಮತ್ತೂರಿನಲ್ಲಿ ನಡೆದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಪಶ್ಚಿಮ ವಲಯ, ಮೊದಲ ಇನಿಂಗ್ಸ್ನಲ್ಲಿ 270 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ದಕ್ಷಿಣ ವಲಯ 327 ರನ್ ಗಳಿಸಿ 57 ರನ್ ಅಂತರದ ಮುನ್ನಡೆ ಸಾಧಿಸಿತ್ತು.</p>.<p>ಅಲ್ಪ ಹಿನ್ನಡೆ ಅನುಭವಿಸಿದರೂ ಎರಡನೇ ಇನಿಂಗ್ಸ್ನಲ್ಲಿ ಅಮೋಘ ಆಟವಾಡಿದ ಪಶ್ಚಿಮ ವಲಯ, ಯಶಸ್ವಿ ಜೈಸ್ವಾಲ್ ಹಾಗೂ ಸರ್ಫರಾಜ್ ಖಾನ್ ಅವರ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು.</p>.<p>323 ಎಸೆತಗಳನ್ನು ಆಡಿದ ಜೈಸ್ವಾಲ್ 30 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 265 ರನ್ ಚಚ್ಚಿದರು. ಸರ್ಫರಾಜ್ 127 ರನ್ ಗಳಿಸಿ ಮಿಂಚಿದರು. ಹೀಗಾಗಿ ಎದುರಾಳಿಗಳ ಗೆಲುವಿಗೆ 529 ರನ್ಗಳ ಕಠಿಣ ಸವಾಲು ಒಡ್ಡಲು ಸಾಧ್ಯವಾಯಿತು.</p>.<p>ಈ ಗುರಿ ಎದುರು ದಕ್ಷಿಣ ವಲಯದ ಆಟಗಾರರಿಂದ ಉತ್ತಮ ಆಟ ಮೂಡಿ ಬರಲಿಲ್ಲ. ಆರಂಭಿಕ ಬ್ಯಾಟರ್ ರೋಹನ್ ಕುನ್ನುಮಲ್ (93 ರನ್) ಹಾಗೂ ಕೊನೆಯಲ್ಲಿ ಟಿ.ಆರ್. ತೇಜಾ (53) ಕೊಂಚ ಪ್ರತಿರೋಧ ತೋರಿದರಾದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.</p>.<p>ಅಂತಿಮವಾಗಿ ದಕ್ಷಿಣ ವಲಯ 234 ರನ್ಗಳಿಗೆ ಆಲೌಟ್ ಆಗುವುದರೊಂದಿಗೆ 294 ರನ್ ಅಂತರದ ಸೋಲಪ್ಪಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಯಮತ್ತೂರು:</strong> ಈ ಬಾರಿಯ ದುಲೀಪ್ ಟ್ರೋಫಿ ಟೆಸ್ಟ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ತಂಡವು ದಕ್ಷಿಣ ವಲಯ ವಿರುದ್ಧ 294 ರನ್ ಅಂತರದ ಗೆಲುವು ದಾಖಲಿಸಿದೆ.</p>.<p>ಕೊಯಮತ್ತೂರಿನಲ್ಲಿ ನಡೆದ ಪಂದ್ಯದಲ್ಲಿ ಅಜಿಂಕ್ಯ ರಹಾನೆ ನೇತೃತ್ವದ ಪಶ್ಚಿಮ ವಲಯ, ಮೊದಲ ಇನಿಂಗ್ಸ್ನಲ್ಲಿ 270 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ದಕ್ಷಿಣ ವಲಯ 327 ರನ್ ಗಳಿಸಿ 57 ರನ್ ಅಂತರದ ಮುನ್ನಡೆ ಸಾಧಿಸಿತ್ತು.</p>.<p>ಅಲ್ಪ ಹಿನ್ನಡೆ ಅನುಭವಿಸಿದರೂ ಎರಡನೇ ಇನಿಂಗ್ಸ್ನಲ್ಲಿ ಅಮೋಘ ಆಟವಾಡಿದ ಪಶ್ಚಿಮ ವಲಯ, ಯಶಸ್ವಿ ಜೈಸ್ವಾಲ್ ಹಾಗೂ ಸರ್ಫರಾಜ್ ಖಾನ್ ಅವರ ಬ್ಯಾಟಿಂಗ್ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು.</p>.<p>323 ಎಸೆತಗಳನ್ನು ಆಡಿದ ಜೈಸ್ವಾಲ್ 30 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 265 ರನ್ ಚಚ್ಚಿದರು. ಸರ್ಫರಾಜ್ 127 ರನ್ ಗಳಿಸಿ ಮಿಂಚಿದರು. ಹೀಗಾಗಿ ಎದುರಾಳಿಗಳ ಗೆಲುವಿಗೆ 529 ರನ್ಗಳ ಕಠಿಣ ಸವಾಲು ಒಡ್ಡಲು ಸಾಧ್ಯವಾಯಿತು.</p>.<p>ಈ ಗುರಿ ಎದುರು ದಕ್ಷಿಣ ವಲಯದ ಆಟಗಾರರಿಂದ ಉತ್ತಮ ಆಟ ಮೂಡಿ ಬರಲಿಲ್ಲ. ಆರಂಭಿಕ ಬ್ಯಾಟರ್ ರೋಹನ್ ಕುನ್ನುಮಲ್ (93 ರನ್) ಹಾಗೂ ಕೊನೆಯಲ್ಲಿ ಟಿ.ಆರ್. ತೇಜಾ (53) ಕೊಂಚ ಪ್ರತಿರೋಧ ತೋರಿದರಾದರೂ ಗೆಲುವು ತಂದುಕೊಡಲು ಸಾಧ್ಯವಾಗಲಿಲ್ಲ.</p>.<p>ಅಂತಿಮವಾಗಿ ದಕ್ಷಿಣ ವಲಯ 234 ರನ್ಗಳಿಗೆ ಆಲೌಟ್ ಆಗುವುದರೊಂದಿಗೆ 294 ರನ್ ಅಂತರದ ಸೋಲಪ್ಪಿಕೊಂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>