<p><strong>ವಿಶಾಖಪಟ್ಟಣಂ</strong>: 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು, ಹಿರಿಯ ಆಟಗಾರರನ್ನು ಸಂಪೂರ್ಣವಾಗಿ ಕೈಬಿಡದೆ, ಹೊಸಬರನ್ನೂ ಒಳಗೊಂಡಂತೆ ಸಮತೋಲನದಿಂದ ಕೂಡಿದ ಭಾರತ ತಂಡ ಕಟ್ಟುವ ಪ್ರಯತ್ನಗಳು ನಡೆಯುತ್ತಿವೆ.</p><p>ಹೊಸ 'ಟೀಂ ಇಂಡಿಯಾ' ಕಟ್ಟುವ ಪ್ರಕ್ರಿಯೆಗೆ ಮುತುವರ್ಜಿ ವಹಿಸಿರುವ ಮುಖ್ಯ ಕೋಚ್ ಗೌತಮ್ ಗಂಭೀರ್, ಅನುಭವಿ ಹಾಗೂ ಯುವ ಆಟಗಾರರು ನೀಡುತ್ತಿರುವ ಕೊಡುಗೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.</p><p>ಶನಿವಾರವಷ್ಟೇ (ಡಿ.6) ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಗಂಭೀರ್, ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಅವರಿಬ್ಬರೂ ಪ್ರಸ್ತುತ ಸರಣಿಯಲ್ಲಿ ನೀಡಿದಂತಹ ಪ್ರದರ್ಶನವನ್ನು ಮುಂದುವರಿಸುವ ವಿಶ್ವಾಸವಿದೆ. ಇದರಿಂದ, ಏಕದಿನ ಕ್ರಿಕೆಟ್ ಉತ್ತಮ ಸ್ಥಿತಿಯಲ್ಲಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ವಿರಾಟ್, ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸಹಿತ 302 ರನ್ ಗಳಿಸಿ ಸರಣಿ ಶ್ರೇಷ್ಠ ಎನಿಸಿದರೆ, ರೋಹಿತ್ ಎರಡು ಅರ್ಧಶತಕ ಸಹಿತ 146 ರನ್ ಗಳಿಸಿ ಉತ್ತಮ ಆಟವಾಡಿದರು.</p>.ನೂರು 'ನೂರು': ಸಚಿನ್ ದಾಖಲೆ ಮುರಿಯುವರೇ ಕೊಹ್ಲಿ: ಗವಾಸ್ಕರ್ ಹೇಳಿದ್ದಿಷ್ಟು....ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ.<p>'ನೋಡಿ, ಅವರಿಬ್ಬರೂ ಗುಣಮಟ್ಟದ ಆಟಗಾರರು. ವಿಶ್ವದರ್ಜೆ ಆಟಗಾರರು ಎಂಬುದನ್ನು ಸಾಕಷ್ಟು ಸಲ ಹೇಳಿದ್ದೇನೆ. ಡ್ರೆಸ್ಸಿಂಗ್ ಕೋಣೆಗೆ ಅವರ ಅನುಭವ ಅತ್ಯಗತ್ಯ. ತಮ್ಮಿಂದ ಏನು ಮಾಡಲು ಸಾಧ್ಯವೋ ಅದನ್ನು ಅವರಿಬ್ಬರೂ ಮಾಡುತ್ತಿದ್ದಾರೆ. ಅದನ್ನು ಮುಂದುವರಿಸುತ್ತಾರೆ ಎನ್ನುವ ವಿಶ್ವಾಸವಿದೆ' ಎಂದು ಹೇಳಿದ್ದಾರೆ.</p><p>ವೇಗಿಗಳಾದ ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಗೈರು, ಬ್ಯಾಟರ್ ಶುಭಮನ್ ಗಿಲ್ ಮತ್ತು ಹಾರ್ದಿಪ್ ಪಾಂಡ್ಯ ಅವರು ಗಾಯದಿಂದ ವಿಶ್ರಾಂತಿಯಲ್ಲಿದ್ದ ಕಾರಣ ಉದಯೋನ್ಮುಖ ಆಟಗಾರರಿಗೆ ಅವಕಾಶ ನೀಡಲಾಯಿತು. ಅದರಲ್ಲಿ ಹರ್ಷಿತ್ ರಾಣಾ ಕೂಡ ಒಬ್ಬರು.</p><p>‘ಹರ್ಷಿತ್ ಅವರಿಗೆ ಅವಕಾಶ ನೀಡುತ್ತಿರುವುದರ ಹಿಂದೆ ಮುಖ್ಯ ಕಾರಣವೆಂದರೆ ಎಂಟನೇ ಕ್ರಮಾಂಕದಲಲ್ಲಿ ಬ್ಯಾಟರ್ ಒಬ್ಬರನ್ನು ಬೆಳೆಸುವುದಾಗಿದೆ. ಏಕೆಂದರೆ ಇನ್ನೆರಡು ವರ್ಷಗಳ ನಂತರ ನಾವು ದಕ್ಷಿಣ ಆಫ್ರಿಕಾದಲ್ಲಿ (2027ರ ಏಕದಿನ ವಿಶ್ವಕಪ್) ಆಡಬೇಕಿದೆ’ ಎಂದು ಗಂಭೀರ್ ಹೇಳಿದ್ದಾರೆ.</p><p>‘ಈ ಸರಣಿಯಲ್ಲಿ ಅರ್ಷದೀಪ್, ಪ್ರಸಿದ್ಧ ಮತ್ತು ಹರ್ಷಿತ್ ಅವರು ಅಮೋಘವಾಗಿ ಆಡಿದ್ದಾರೆ. ಈ ಮೂವರಿಗೂ ಹೆಚ್ಚು ಅನುಭವ ಇಲ್ಲ. ಆದರೆ ಒತ್ತಡವನ್ನು ನಿಭಾಯಿಸಿ ಉತ್ತಮವಾಗಿ ಆಡಿದ್ದಾರೆ’ ಎಂದು ಗಂಭೀರ್ ಶ್ಲಾಘಿಸಿದ್ದಾರೆ.</p>.IND vs SA: ಕಳೆದ 2-3 ವರ್ಷಗಳಲ್ಲಿ ಈ ತರ ಆಡಲೇ ಇಲ್ಲ ಎಂದ ವಿರಾಟ್ ಕೊಹ್ಲಿ.IND vs SA| ಜೈಸ್ವಾಲ್ ಶತಕ; ವಿರಾಟ್, ರೋಹಿತ್ ಅಬ್ಬರ: ಸರಣಿ ಗೆದ್ದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣಂ</strong>: 2027ರ ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು, ಹಿರಿಯ ಆಟಗಾರರನ್ನು ಸಂಪೂರ್ಣವಾಗಿ ಕೈಬಿಡದೆ, ಹೊಸಬರನ್ನೂ ಒಳಗೊಂಡಂತೆ ಸಮತೋಲನದಿಂದ ಕೂಡಿದ ಭಾರತ ತಂಡ ಕಟ್ಟುವ ಪ್ರಯತ್ನಗಳು ನಡೆಯುತ್ತಿವೆ.</p><p>ಹೊಸ 'ಟೀಂ ಇಂಡಿಯಾ' ಕಟ್ಟುವ ಪ್ರಕ್ರಿಯೆಗೆ ಮುತುವರ್ಜಿ ವಹಿಸಿರುವ ಮುಖ್ಯ ಕೋಚ್ ಗೌತಮ್ ಗಂಭೀರ್, ಅನುಭವಿ ಹಾಗೂ ಯುವ ಆಟಗಾರರು ನೀಡುತ್ತಿರುವ ಕೊಡುಗೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.</p><p>ಶನಿವಾರವಷ್ಟೇ (ಡಿ.6) ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಗಂಭೀರ್, ಅನುಭವಿಗಳಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.</p><p>ಅವರಿಬ್ಬರೂ ಪ್ರಸ್ತುತ ಸರಣಿಯಲ್ಲಿ ನೀಡಿದಂತಹ ಪ್ರದರ್ಶನವನ್ನು ಮುಂದುವರಿಸುವ ವಿಶ್ವಾಸವಿದೆ. ಇದರಿಂದ, ಏಕದಿನ ಕ್ರಿಕೆಟ್ ಉತ್ತಮ ಸ್ಥಿತಿಯಲ್ಲಿ ಉಳಿಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.</p><p>ವಿರಾಟ್, ಮೂರು ಪಂದ್ಯಗಳಲ್ಲಿ ಎರಡು ಶತಕ, ಒಂದು ಅರ್ಧಶತಕ ಸಹಿತ 302 ರನ್ ಗಳಿಸಿ ಸರಣಿ ಶ್ರೇಷ್ಠ ಎನಿಸಿದರೆ, ರೋಹಿತ್ ಎರಡು ಅರ್ಧಶತಕ ಸಹಿತ 146 ರನ್ ಗಳಿಸಿ ಉತ್ತಮ ಆಟವಾಡಿದರು.</p>.ನೂರು 'ನೂರು': ಸಚಿನ್ ದಾಖಲೆ ಮುರಿಯುವರೇ ಕೊಹ್ಲಿ: ಗವಾಸ್ಕರ್ ಹೇಳಿದ್ದಿಷ್ಟು....ಸಿಂಹಾಚಲಂ ವರಾಹ ಲಕ್ಷ್ಮಿನರಸಿಂಹಸ್ವಾಮಿ ದೇಗುಲಕ್ಕೆ ಕೊಹ್ಲಿ ಭೇಟಿ: ವಿಶೇಷ ಪೂಜೆ.<p>'ನೋಡಿ, ಅವರಿಬ್ಬರೂ ಗುಣಮಟ್ಟದ ಆಟಗಾರರು. ವಿಶ್ವದರ್ಜೆ ಆಟಗಾರರು ಎಂಬುದನ್ನು ಸಾಕಷ್ಟು ಸಲ ಹೇಳಿದ್ದೇನೆ. ಡ್ರೆಸ್ಸಿಂಗ್ ಕೋಣೆಗೆ ಅವರ ಅನುಭವ ಅತ್ಯಗತ್ಯ. ತಮ್ಮಿಂದ ಏನು ಮಾಡಲು ಸಾಧ್ಯವೋ ಅದನ್ನು ಅವರಿಬ್ಬರೂ ಮಾಡುತ್ತಿದ್ದಾರೆ. ಅದನ್ನು ಮುಂದುವರಿಸುತ್ತಾರೆ ಎನ್ನುವ ವಿಶ್ವಾಸವಿದೆ' ಎಂದು ಹೇಳಿದ್ದಾರೆ.</p><p>ವೇಗಿಗಳಾದ ಜಸ್ಪ್ರೀತ್ ಬೂಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಗೈರು, ಬ್ಯಾಟರ್ ಶುಭಮನ್ ಗಿಲ್ ಮತ್ತು ಹಾರ್ದಿಪ್ ಪಾಂಡ್ಯ ಅವರು ಗಾಯದಿಂದ ವಿಶ್ರಾಂತಿಯಲ್ಲಿದ್ದ ಕಾರಣ ಉದಯೋನ್ಮುಖ ಆಟಗಾರರಿಗೆ ಅವಕಾಶ ನೀಡಲಾಯಿತು. ಅದರಲ್ಲಿ ಹರ್ಷಿತ್ ರಾಣಾ ಕೂಡ ಒಬ್ಬರು.</p><p>‘ಹರ್ಷಿತ್ ಅವರಿಗೆ ಅವಕಾಶ ನೀಡುತ್ತಿರುವುದರ ಹಿಂದೆ ಮುಖ್ಯ ಕಾರಣವೆಂದರೆ ಎಂಟನೇ ಕ್ರಮಾಂಕದಲಲ್ಲಿ ಬ್ಯಾಟರ್ ಒಬ್ಬರನ್ನು ಬೆಳೆಸುವುದಾಗಿದೆ. ಏಕೆಂದರೆ ಇನ್ನೆರಡು ವರ್ಷಗಳ ನಂತರ ನಾವು ದಕ್ಷಿಣ ಆಫ್ರಿಕಾದಲ್ಲಿ (2027ರ ಏಕದಿನ ವಿಶ್ವಕಪ್) ಆಡಬೇಕಿದೆ’ ಎಂದು ಗಂಭೀರ್ ಹೇಳಿದ್ದಾರೆ.</p><p>‘ಈ ಸರಣಿಯಲ್ಲಿ ಅರ್ಷದೀಪ್, ಪ್ರಸಿದ್ಧ ಮತ್ತು ಹರ್ಷಿತ್ ಅವರು ಅಮೋಘವಾಗಿ ಆಡಿದ್ದಾರೆ. ಈ ಮೂವರಿಗೂ ಹೆಚ್ಚು ಅನುಭವ ಇಲ್ಲ. ಆದರೆ ಒತ್ತಡವನ್ನು ನಿಭಾಯಿಸಿ ಉತ್ತಮವಾಗಿ ಆಡಿದ್ದಾರೆ’ ಎಂದು ಗಂಭೀರ್ ಶ್ಲಾಘಿಸಿದ್ದಾರೆ.</p>.IND vs SA: ಕಳೆದ 2-3 ವರ್ಷಗಳಲ್ಲಿ ಈ ತರ ಆಡಲೇ ಇಲ್ಲ ಎಂದ ವಿರಾಟ್ ಕೊಹ್ಲಿ.IND vs SA| ಜೈಸ್ವಾಲ್ ಶತಕ; ವಿರಾಟ್, ರೋಹಿತ್ ಅಬ್ಬರ: ಸರಣಿ ಗೆದ್ದ ಭಾರತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>