ಈ ಘಟನೆಯ ವಿಡಿಯೊ ಟ್ವೀಟ್ ಮಾಡಿರುವ ಸಂಸದ ಮತ್ತು ದೆಹಲಿಯ ಹಿರಿಯ ಕ್ರಿಕೆಟಿಗ ಗೌತಮ್ ಗಂಭೀರ್, ‘ಇಗೋ ನೋಡಿ, ಒಂದು ಪ್ರತಿಷ್ಠಿತ ಸಂಸ್ಥೆಯ ಘನತೆಯನ್ನು ಕೆಲವು ದುಷ್ಟರು ಮಣ್ಣುಪಾಲು ಮಾಡುತ್ತಿದ್ದಾರೆ. ಬಿಸಿಸಿಐ ಅಧ್ಯಕ್ಷರಾದ ಸೌರವ್ ಗಂಗೂಲಿ, ಕಾರ್ಯದರ್ಶಿ ಜೈ ಶಾ ಅವರೇ ದಯವಿಟ್ಟು ಇತ್ತ ಗಮನ ಹರಿಸಿ. ಡಿಡಿಸಿಎ ಆಡಳಿತ ಮಂಡಳಿಯನ್ನು ಕೂಡಲೇ ವಿಸರ್ಜಿಸಿ’ ಎಂದು ಆಗ್ರಹಿಸಿದ್ದಾರೆ.