‘ಕಳೆದ ಒಂಭತ್ತು ದಿನಗಳಲ್ಲಿ ಐದು ಪಂದ್ಯಗಳನ್ನು ಆಡಿದ ಕಾರಣ, ಆಟಗಾರರು ದೈಹಿಕವಾಗಿ ಮತ್ತು ಮಾನಸಿಕವಾಗಿ ಸಾಕಷ್ಟು ಬಳಲಿದ್ದರು. ಮುಂದಿನ ಶುಕ್ರವಾರ ರಾಯಲ್ ಚಾಲೆಂಜರ್ಸ್ ವಿರುದ್ಧ ಕೆಕೆಆರ್ ತಂಡ ಮುಖಾಮುಖಿಯಾಗಲಿದೆ. ಇದರಿಂದ ಐದು ದಿನಗಳ ಕಾಲ ವಿಶ್ರಾಂತಿ ಸಿಕ್ಕಿದ್ದು, ಹಿಂದಿನ ಸೋಲಿನಿಂದ ಚೇತರಿಸಿಕೊಳ್ಳಲು ಇದು ಸಹಕಾರಿಯಾಗಲಿದೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.