ಟಿ20 ವಿಶ್ವಕಪ್ ಟೂರ್ನಿಯ ನಂತರ ರವಿಶಾಸ್ತ್ರಿ, ಬೌಲಿಂಗ್ ಕೋಚ್ ಭರತ್ ಅರುಣ್ ಅವರ ಕಾರ್ಯಾವಧಿ ಮುಕ್ತಾಯಗೊಂಡಿದೆ. ವಿರಾಟ್ ಕೂಡ ಟಿ20 ತಂಡದ ನಾಯಕತ್ವ ಬಿಟ್ಟುಕೊಟ್ಟಿದ್ದಾರೆ. ನವೆಂಬರ್ 17ರಿಂದ ನ್ಯೂಜಿಲೆಂಡ್ ಎದುರು ನಡೆಯಲಿರುವ ಚುಟುಕು ಕ್ರಿಕೆಟ್ ಸರಣಿಯಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುವರು. ರಾಹುಲ್ ದ್ರಾವಿಡ್ ಮುಖ್ಯ ಕೋಚ್ ಆಗಿ ಕಾರ್ಯಾರಂಭ ಮಾಡಲಿದ್ಧಾರೆ.