<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧ ಕಣಕ್ಕಿಳಿಯುವಾಗ ಹಳೆಯ ಕಳಪೆ ದಾಖಲೆಗಳ ಬಗ್ಗೆ ಯೋಚಿಸಬಾರದು ಎಂದು ಪಾಕಿಸ್ತಾನದ ನಾಯಕ ಬಾಬರ್ ಆಜಂ ಸಹ ಆಟಗಾರರಿಗೆ ಸಲಹೆ ಮಾಡಿದ್ದಾರೆ.</p>.<p>ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 24 ಭಾನುವಾರ ದುಬೈಯಲ್ಲಿ ನಡೆಯಲಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ರೋಚಕತೆ ಮನೆ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/pakistan-announces-squad-for-t20-world-cup-match-against-india-877918.html" itemprop="url">T20 WC: ಭಾರತದ ವಿರುದ್ಧದ ಪಂದ್ಯಕ್ಕೆ ತಂಡ ಪ್ರಕಟಿಸಿದ ಪಾಕಿಸ್ತಾನ </a></p>.<p>ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡಿದ ಎಲ್ಲ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಏಕದಿನ ವಿಶ್ವಕಪ್ನಲ್ಲಿ 7-0 ಹಾಗೂ ಟಿ20 ವಿಶ್ವಕಪ್ನಲ್ಲಿ 5-0 ಅಂತರದ ಗೆಲುವಿನ ದಾಖಲೆ ಹೊಂದಿದೆ.</p>.<p>ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕಳೆದು ಹೋಗಿರುವುದರ ಬಗ್ಗೆ ಚಿಂತಿಸಬಾರದು. 'ದಾಖಲೆಗಳು ಇರುವುದೇ ಮುರಿಯಲು' ಎಂದು ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಶನಿವಾರ ನಡೆದ ವರ್ಚ್ಯುವಲ್ ಸುದ್ದಿಗೋಷ್ಠಿಯಲ್ಲಿ ಸಹ ಆಟಗಾರರಿಗೆ ಸಲಹೆ ಮಾಡಿದರು.</p>.<p>'ಪಾಕಿಸ್ತಾನ ಹಾಗೂ ಭಾರತ ನಡುವಣ ಪಂದ್ಯವು ಯಾವಾಗಲೂ ತೀವ್ರತೆಯಿಂದ ಆಡಲಾಗುತ್ತದೆ. ಆದ್ದರಿಂದ ಪಂದ್ಯದ ಎಲ್ಲ ಮೂರು ವಿಭಾಗಗಳಲ್ಲೂ ನಾವು ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ' ಎಂದು ಹೇಳಿದರು.</p>.<p>'ವಿಶ್ವಕಪ್ನಲ್ಲಿ ಆಡಲು ಎಲ್ಲರೂ ಅತೀವ ಉತ್ಸುಕರಾಗಿದ್ದು, ಭಾನುವಾರ ಮಹತ್ವದ ಪಂದ್ಯವಿದೆ. ಗೆಲುವು ದಾಖಲಿಸುವುದು ಮುಖ್ಯವೆನಿಸುತ್ತದೆ' ಎಂದು ಹೇಳಿದರು.</p>.<p><strong>ಪಾಕ್ ಪ್ರಧಾನಿ ಇಮ್ರಾನ್ ಸಲಹೆ...</strong><br />'ವಿಶ್ವಕಪ್ಗೆ ತೆರಳುವ ಮುನ್ನ ಪ್ರಧಾನಿ ಇಮ್ರಾನ್ ಖಾನ್ ನಮ್ಮನ್ನು ಭೇಟಿ ಮಾಡಿದರು. ಅವರು 1992ರ ವಿಶ್ವಕಪ್ ಗೆಲುವಿನ ಅನುಭವಗಳನ್ನು ಹಂಚಿಕೊಂಡರು. ಭಾರತದ ವಿರುದ್ಧ ಆಕ್ರಮಣಕಾರಿ ಹಾಗೂ ನಿರ್ಭೀತ ಕ್ರಿಕೆಟ್ ಆಡುವಂತೆ ಸಲಹೆ ಮಾಡಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದುಬೈ:</strong> ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧ ಕಣಕ್ಕಿಳಿಯುವಾಗ ಹಳೆಯ ಕಳಪೆ ದಾಖಲೆಗಳ ಬಗ್ಗೆ ಯೋಚಿಸಬಾರದು ಎಂದು ಪಾಕಿಸ್ತಾನದ ನಾಯಕ ಬಾಬರ್ ಆಜಂ ಸಹ ಆಟಗಾರರಿಗೆ ಸಲಹೆ ಮಾಡಿದ್ದಾರೆ.</p>.<p>ಟ್ವೆಂಟಿ-20 ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಣ ಪಂದ್ಯವು ಅಕ್ಟೋಬರ್ 24 ಭಾನುವಾರ ದುಬೈಯಲ್ಲಿ ನಡೆಯಲಿದೆ. ಕ್ರಿಕೆಟ್ ಅಭಿಮಾನಿಗಳಲ್ಲಿ ರೋಚಕತೆ ಮನೆ ಮಾಡಿದೆ.</p>.<p>ಇದನ್ನೂ ಓದಿ:<a href="https://www.prajavani.net/sports/cricket/pakistan-announces-squad-for-t20-world-cup-match-against-india-877918.html" itemprop="url">T20 WC: ಭಾರತದ ವಿರುದ್ಧದ ಪಂದ್ಯಕ್ಕೆ ತಂಡ ಪ್ರಕಟಿಸಿದ ಪಾಕಿಸ್ತಾನ </a></p>.<p>ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆಡಿದ ಎಲ್ಲ 12 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಏಕದಿನ ವಿಶ್ವಕಪ್ನಲ್ಲಿ 7-0 ಹಾಗೂ ಟಿ20 ವಿಶ್ವಕಪ್ನಲ್ಲಿ 5-0 ಅಂತರದ ಗೆಲುವಿನ ದಾಖಲೆ ಹೊಂದಿದೆ.</p>.<p>ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕಳೆದು ಹೋಗಿರುವುದರ ಬಗ್ಗೆ ಚಿಂತಿಸಬಾರದು. 'ದಾಖಲೆಗಳು ಇರುವುದೇ ಮುರಿಯಲು' ಎಂದು ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಶನಿವಾರ ನಡೆದ ವರ್ಚ್ಯುವಲ್ ಸುದ್ದಿಗೋಷ್ಠಿಯಲ್ಲಿ ಸಹ ಆಟಗಾರರಿಗೆ ಸಲಹೆ ಮಾಡಿದರು.</p>.<p>'ಪಾಕಿಸ್ತಾನ ಹಾಗೂ ಭಾರತ ನಡುವಣ ಪಂದ್ಯವು ಯಾವಾಗಲೂ ತೀವ್ರತೆಯಿಂದ ಆಡಲಾಗುತ್ತದೆ. ಆದ್ದರಿಂದ ಪಂದ್ಯದ ಎಲ್ಲ ಮೂರು ವಿಭಾಗಗಳಲ್ಲೂ ನಾವು ಅತ್ಯುತ್ತಮ ಪ್ರದರ್ಶನ ನೀಡಬೇಕಿದೆ' ಎಂದು ಹೇಳಿದರು.</p>.<p>'ವಿಶ್ವಕಪ್ನಲ್ಲಿ ಆಡಲು ಎಲ್ಲರೂ ಅತೀವ ಉತ್ಸುಕರಾಗಿದ್ದು, ಭಾನುವಾರ ಮಹತ್ವದ ಪಂದ್ಯವಿದೆ. ಗೆಲುವು ದಾಖಲಿಸುವುದು ಮುಖ್ಯವೆನಿಸುತ್ತದೆ' ಎಂದು ಹೇಳಿದರು.</p>.<p><strong>ಪಾಕ್ ಪ್ರಧಾನಿ ಇಮ್ರಾನ್ ಸಲಹೆ...</strong><br />'ವಿಶ್ವಕಪ್ಗೆ ತೆರಳುವ ಮುನ್ನ ಪ್ರಧಾನಿ ಇಮ್ರಾನ್ ಖಾನ್ ನಮ್ಮನ್ನು ಭೇಟಿ ಮಾಡಿದರು. ಅವರು 1992ರ ವಿಶ್ವಕಪ್ ಗೆಲುವಿನ ಅನುಭವಗಳನ್ನು ಹಂಚಿಕೊಂಡರು. ಭಾರತದ ವಿರುದ್ಧ ಆಕ್ರಮಣಕಾರಿ ಹಾಗೂ ನಿರ್ಭೀತ ಕ್ರಿಕೆಟ್ ಆಡುವಂತೆ ಸಲಹೆ ಮಾಡಿದ್ದಾರೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>