<p><strong>ನವದೆಹಲಿ:</strong> ಭಾರತ ತಂಡದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಅವರ ಆರೋಗ್ಯ ಸ್ಥಿತಿಯು ಮತ್ತಷ್ಟು ಬಿಗಡಾಯಿಸಿದೆ. ಅವರಿಗೆ ಕೃತಕ ಉಸಿರಾಟದ ಚಿಕಿತ್ಸೆ ನೀಡಲಾಗುತ್ತಿದೆ.</p>.<p>73 ವರ್ಷದ ಚೇತನ್ ಅವರು ಗುರುಗ್ರಾಮ್ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ. ಆದರೆ ಅವರು ಬಹುಅಂಗಾಂಗ ವೈಫಲ್ಯಕ್ಕೊಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶ ರಾಜ್ಯ ಸರ್ಕಾರದಲ್ಲಿ ಸಚಿವ ಕೂಡ ಆಗಿರುವ ಚೇತನ್, ಹೋದ ಜುಲೈ 12ರಂದು ಕೋವಿಡ್ –19 ಸೋಂಕಿಗೆ ತುತ್ತಾಗಿದ್ದರು. ಆಗ ಅವರನ್ನು ಲಖನೌನ ಸಂಜಯ್ ಗಾಂಧಿ ಪಿಜಿ ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಆದರೆ ಆಗಿನಿಂದಲೂ ಅವರು ಚೇತರಿಸಿಕೊಂಡಿಲ್ಲ. ಕೆಲವು ದಿನಗಳ ಹಿಂದಷ್ಟೇ ಅವರನ್ನು ಗುರುಗ್ರಾಮದಲ್ಲಿರುವ ಮೇದಾಂತ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.</p>.<p>'ಇವತ್ತು ಬೆಳಿಗ್ಗೆ (ಶನಿವಾರ) ಚೇತನ್ ಅವರ ಮೂತ್ರಕೋಶ ನಿಷ್ಕ್ರೀಯವಾಗಿದೆ. ಬಹುಅಂಗಾಂಗ ವೈಫಲ್ಯವೂ ಆಗುತ್ತಿದೆ. ಅವರಿಗೆ ವೆಂಟಿಲೇಟರ್ ಸೌಲಭ್ಯ ಒದಗಿಸಲಾಗಿದೆ. ಅವರು ಚೇತರಿಸಿಕೆಗಾಗಿ ಅಭಿಮಾನಿಗಳು ಮತ್ತು ಕುಟಂಬದ ಸದಸ್ಯರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ'ಎಂದು ದೆಹಲಿ ಡಿಸ್ಟ್ರಿಕ್ಸ್ಟ್ ಕ್ರಿಕೆಟ್ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಅವರು 40 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. ಏಳು ಏಕದಿನ ಪಂದ್ಯಗಳಲ್ಲಿಯೂ ಭಾರತವನ್ನು ಪ್ರತಿನಿಧಿಸಿದ್ದರು.</p>.<p>ಕ್ರಿಕೆಟ್ನಿಂದ ನಿವೃತ್ತರಾದ ನಂತರ ಡಿಡಿಸಿಎಗೆ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಮತ್ತು ಉತ್ತರ ವಲಯದ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದರು. ರಾಜಕೀಯದಲ್ಲಿಯೂ ಸಕ್ರಿಯರಾಗಿರುವ ಅವರು ಬಿಜೆಪಿಯಿಂದ ಸಂಸದರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಭಾರತ ತಂಡದ ಮಾಜಿ ಕ್ರಿಕೆಟಿಗ ಚೇತನ್ ಚೌಹಾಣ್ ಅವರ ಆರೋಗ್ಯ ಸ್ಥಿತಿಯು ಮತ್ತಷ್ಟು ಬಿಗಡಾಯಿಸಿದೆ. ಅವರಿಗೆ ಕೃತಕ ಉಸಿರಾಟದ ಚಿಕಿತ್ಸೆ ನೀಡಲಾಗುತ್ತಿದೆ.</p>.<p>73 ವರ್ಷದ ಚೇತನ್ ಅವರು ಗುರುಗ್ರಾಮ್ನಲ್ಲಿರುವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ. ಆದರೆ ಅವರು ಬಹುಅಂಗಾಂಗ ವೈಫಲ್ಯಕ್ಕೊಳಗಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಉತ್ತರ ಪ್ರದೇಶ ರಾಜ್ಯ ಸರ್ಕಾರದಲ್ಲಿ ಸಚಿವ ಕೂಡ ಆಗಿರುವ ಚೇತನ್, ಹೋದ ಜುಲೈ 12ರಂದು ಕೋವಿಡ್ –19 ಸೋಂಕಿಗೆ ತುತ್ತಾಗಿದ್ದರು. ಆಗ ಅವರನ್ನು ಲಖನೌನ ಸಂಜಯ್ ಗಾಂಧಿ ಪಿಜಿ ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಆದರೆ ಆಗಿನಿಂದಲೂ ಅವರು ಚೇತರಿಸಿಕೊಂಡಿಲ್ಲ. ಕೆಲವು ದಿನಗಳ ಹಿಂದಷ್ಟೇ ಅವರನ್ನು ಗುರುಗ್ರಾಮದಲ್ಲಿರುವ ಮೇದಾಂತ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.</p>.<p>'ಇವತ್ತು ಬೆಳಿಗ್ಗೆ (ಶನಿವಾರ) ಚೇತನ್ ಅವರ ಮೂತ್ರಕೋಶ ನಿಷ್ಕ್ರೀಯವಾಗಿದೆ. ಬಹುಅಂಗಾಂಗ ವೈಫಲ್ಯವೂ ಆಗುತ್ತಿದೆ. ಅವರಿಗೆ ವೆಂಟಿಲೇಟರ್ ಸೌಲಭ್ಯ ಒದಗಿಸಲಾಗಿದೆ. ಅವರು ಚೇತರಿಸಿಕೆಗಾಗಿ ಅಭಿಮಾನಿಗಳು ಮತ್ತು ಕುಟಂಬದ ಸದಸ್ಯರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ'ಎಂದು ದೆಹಲಿ ಡಿಸ್ಟ್ರಿಕ್ಸ್ಟ್ ಕ್ರಿಕೆಟ್ ಸಂಸ್ಥೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಆಗಿದ್ದ ಅವರು 40 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. ಏಳು ಏಕದಿನ ಪಂದ್ಯಗಳಲ್ಲಿಯೂ ಭಾರತವನ್ನು ಪ್ರತಿನಿಧಿಸಿದ್ದರು.</p>.<p>ಕ್ರಿಕೆಟ್ನಿಂದ ನಿವೃತ್ತರಾದ ನಂತರ ಡಿಡಿಸಿಎಗೆ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ ಮತ್ತು ಉತ್ತರ ವಲಯದ ಕ್ರಿಕೆಟ್ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದರು. ರಾಜಕೀಯದಲ್ಲಿಯೂ ಸಕ್ರಿಯರಾಗಿರುವ ಅವರು ಬಿಜೆಪಿಯಿಂದ ಸಂಸದರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>