ಬಹುದಿನಗಳಿಂದ ಚರ್ಚೆಯಲ್ಲಿರುವ ತಂಡದ 4ನೇ ಕ್ರಮಾಂಕದ ಬ್ಯಾಟಿಂಗ್ ಬಗ್ಗೆಯೂ ಪ್ರತಿಕ್ರಿಯಿಸಿರುವ ಕುಂಬ್ಳೆ, ಶ್ರೇಯಸ್ ಅಯ್ಯರ್ ಆ ಕ್ರಮಾಂಕದಲ್ಲಿ ಆಡುವುದು ಸೂಕ್ತ. ನಾಲ್ಕನೇ ಕ್ರಮಾಂಕದಲ್ಲಿ ಆಡುವ ಸಂಬಂಧ ಈಗಾಗಲೇ ಹಲವು ಪ್ರಯೋಗಗಳನ್ನು ಮಾಡಲಾಗಿದೆ. ಅಜಿಂಕ್ಯ ರಹಾನೆ, ಅಂಬಟಿ ರಾಯುಡು, ಕೆ.ಎಲ್. ರಾಹುಲ್ ಹೀಗೆ ಹಲವರನ್ನು ಆಡಿಸಲಾಗಿದೆಯಾದರೂ ಯಶಸ್ಸು ಸಾಧ್ಯವಾಗಿಲ್ಲ. ಇತ್ತೀಚಿನ ಪ್ರದರ್ಶನ ಗಮನಿಸಿದರೆಅಯ್ಯರ್ ಅವರನ್ನು ಆ ಕ್ರಮಾಂಕದಲ್ಲಿ ಆಡಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.