<p><strong>ನವದೆಹಲಿ: </strong>ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿನೀತ್ ಸರನ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್ಮನ್ ಮತ್ತು ನೀತಿ ಸಂಹಿತೆ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ಧಾರೆ.</p>.<p>ನ್ಯಾಯಮೂರ್ತಿ ಡಿ.ಕೆ.ಜೈನ್ ಅವರಿಂದ ತೆರವಾದ ಸ್ಥಾನವನ್ನು ಸರನ್ ತುಂಬಿದ್ದಾರೆ. ಜೈನ್ ಅವರ ಅಧಿಕಾರದ ಅವಧಿ ಕಳೆದ ವರ್ಷ ಜೂನ್ನಲ್ಲಿ ಕೊನೆಗೊಂಡಿತ್ತು. ಒಂದು ವರ್ಷದ ಅವಧಿಯಿಂದ ಈ ಎರಡು ಹುದ್ದೆಗಳು ಖಾಲಿಯಿದ್ದವು.</p>.<p>‘ನ್ಯಾಯಮೂರ್ತಿ ಸರನ್ ಅವರ ನೇಮಕ ಕಳೆದ ತಿಂಗಳು ನಡೆದಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು.</p>.<p>65 ವರ್ಷದ ಸರನ್ ಅವರು ಕರ್ನಾಟಕ ಮತ್ತು ಅಲಹಾಬಾದ್ ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಯಾಗಿ, ಒಡಿಶಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p><strong>ಬಿಸಿಸಿಐ ಸಭೆ ನಾಳೆ: </strong>2022–23ರ ಋತುವಿಗೆ ದೇಸಿ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿ ಸಿದ್ಧಪಡಿಸುವುದು ಮತ್ತು ಭಾರತದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಪಂದ್ಯಗಳ ಮಾಧ್ಯಮ ಪ್ರಸಾರ ಹಕ್ಕು ಹರಾಜಿಗೆ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಬಿಸಿಸಿಐ ಆಡಳಿತ ಮಂಡಳಿ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ವಿನೀತ್ ಸರನ್ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್ಮನ್ ಮತ್ತು ನೀತಿ ಸಂಹಿತೆ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ಧಾರೆ.</p>.<p>ನ್ಯಾಯಮೂರ್ತಿ ಡಿ.ಕೆ.ಜೈನ್ ಅವರಿಂದ ತೆರವಾದ ಸ್ಥಾನವನ್ನು ಸರನ್ ತುಂಬಿದ್ದಾರೆ. ಜೈನ್ ಅವರ ಅಧಿಕಾರದ ಅವಧಿ ಕಳೆದ ವರ್ಷ ಜೂನ್ನಲ್ಲಿ ಕೊನೆಗೊಂಡಿತ್ತು. ಒಂದು ವರ್ಷದ ಅವಧಿಯಿಂದ ಈ ಎರಡು ಹುದ್ದೆಗಳು ಖಾಲಿಯಿದ್ದವು.</p>.<p>‘ನ್ಯಾಯಮೂರ್ತಿ ಸರನ್ ಅವರ ನೇಮಕ ಕಳೆದ ತಿಂಗಳು ನಡೆದಿದೆ’ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದರು.</p>.<p>65 ವರ್ಷದ ಸರನ್ ಅವರು ಕರ್ನಾಟಕ ಮತ್ತು ಅಲಹಾಬಾದ್ ಹೈಕೋರ್ಟ್ಗಳಲ್ಲಿ ನ್ಯಾಯಮೂರ್ತಿಯಾಗಿ, ಒಡಿಶಾ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.</p>.<p><strong>ಬಿಸಿಸಿಐ ಸಭೆ ನಾಳೆ: </strong>2022–23ರ ಋತುವಿಗೆ ದೇಸಿ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿ ಸಿದ್ಧಪಡಿಸುವುದು ಮತ್ತು ಭಾರತದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಪಂದ್ಯಗಳ ಮಾಧ್ಯಮ ಪ್ರಸಾರ ಹಕ್ಕು ಹರಾಜಿಗೆ ಸಂಬಂಧಿಸಿದಂತೆ ಚರ್ಚಿಸಲು ಗುರುವಾರ ಬಿಸಿಸಿಐ ಆಡಳಿತ ಮಂಡಳಿ ಸಭೆ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>