ಕೊರೊನಾ ಸೋಂಕು ನಿಯಂತ್ರಿಸಲು ದೇಶದಾದ್ಯಂತ ಲಾಕ್ಡೌನ್ ಇರುವ ಕಾರಣ ಸರಸ್ವತಿ ಪಾತ್ರ ಅವರ ಮೃತದೇಹವನ್ನು ತವರು ರಾಜ್ಯ ಒಡಿಶಾಕ್ಕೆ ಕಳುಹಿಸಲು ಆಗಿರಲಿಲ್ಲ. 49 ವರ್ಷದ ಸರಸ್ವತಿ ಆರು ವರ್ಷಗಳಿಂದ ಗಂಭೀರ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಜಜ್ಪುರ ಜಿಲ್ಲೆಯವರಾದ ಅವರು ಮಧುಮೇಹ, ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಏ. 21ರಂದು ಮೃತಪಟ್ಟಿದರು.