<p><strong>ಪೆಲೆಕೆಲೆ,</strong> <strong>ಶ್ರೀಲಂಕಾ</strong>: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಮಂಗಳವಾರ ಕಾರ್ಯಾರಂಭ ಮಾಡಿದರು. ಶ್ರೀಲಂಕಾ ಎದುರಿನ ಸರಣಿಗಾಗಿ ಭಾರತ ತಂಡದವರು ಇಲ್ಲಿ ಅಭ್ಯಾಸ ನಡೆಸಿದರು. ಗಂಭೀರ್ ಮಾರ್ಗದರ್ಶನ ನೀಡಿದರು. ಫೀಲ್ಡಿಂಗ್ ಅಭ್ಯಾಸವೂ ಸೇರಿದಂತೆ ವಿವಿಧ ಕಸರತ್ತುಗಳನ್ನು ಆಟಗಾರರು ಮಾಡಿದರು. </p>.<p>ತರಬೇತಿ ಅವಧಿಯಲ್ಲಿ ಓಟ, ಕ್ಯಾಚಿಂಗ್ ಮತ್ತು ಪ್ರತಿಯೊಬ್ಬ ಆಟಗಾರನೊಂದಿಗೆ ಪ್ರತ್ಯೇಕ ಮಾತುಕತೆ ಇದ್ದವು. ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಈ ಸಂದರ್ಭದಲ್ಲಿ ಸಹ ಆಟಗಾರರೊಂದಿಗೆ ಚರ್ಚೆ ನಡೆಸಿದರು. </p>.<p>ವಿಕೆಟ್ಕೀಪರ್–ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಬ್ಯಾಟಿಂಗ್ ಕುರಿತ ಕೆಲವು ಸಲಹೆಗಳನ್ನು ಗಂಭೀರ್ ನೀಡಿದರು. ಆಲ್ರೌಂಡರ್ ಶಿವಂ ದುಬೆ ಅವರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದ್ದು ಕಂಡುಬಂತು. </p>.<p>ಶ್ರೀಲಂಕಾ ಪ್ರವಾಸದಲ್ಲಿ ಗಂಭೀರ್ ಅವರ ನೆರವು ಸಿಬ್ಬಂದಿಯಾಗಿರುವ ಮಾಜಿ ಕ್ರಿಕೆಟಿಗ ಅಭಿಷೇಕ್ ನಾಯರ್ ಮತ್ತು ನೆದರ್ಲೆಂಡ್ಸ್ ಬ್ಯಾಟರ್ ರಯನ್ ಟೆನ್ ಡಾಷೆ ಅವರೂ ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದರು. ಈ ಮೂವರೂ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡದಲ್ಲಿದ್ದರು. </p>.<p>ಈ ಹಿಂದೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿದ್ದ ಸಂದರ್ಭದಲ್ಲಿ ಫೀಲ್ಡಿಂಗ್ ಕೋಚ್ ಆಗಿದ್ದ ಟಿ. ದಿಲೀಪ್ ಅವರೂ ತಂಡದಲ್ಲಿ ಮುಂದುವರಿದಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿರುವ ಸಾಯಿರಾಜ್ ಬಹುತುಳೆ ಕೂಡ ಹಂಗಾಮಿ ಬೌಲಿಂಗ್ ಕೋಚ್ ಆಗಿ ತಂಡದಲ್ಲಿದ್ದಾರೆ.</p>.<p>ಭಾರತ ತಂಡವು ಈಚೆಗೆ ಟಿ20 ವಿಶ್ವಕಪ್ ಜಯಿಸಿದ ನಂತರ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿಯು ಮುಕ್ತಾಯವಾಗಿತ್ತು. ಅವರ ನಂತರ ಗಂಭೀರ್ ನೇಮಕವಾಗಿದ್ದಾರೆ. </p>.<p>ಇದೇ 27ರಿಂದ ಲಂಕಾ ವಿರುದ್ಧದ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೆಲೆಕೆಲೆ,</strong> <strong>ಶ್ರೀಲಂಕಾ</strong>: ಭಾರತ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ಮಂಗಳವಾರ ಕಾರ್ಯಾರಂಭ ಮಾಡಿದರು. ಶ್ರೀಲಂಕಾ ಎದುರಿನ ಸರಣಿಗಾಗಿ ಭಾರತ ತಂಡದವರು ಇಲ್ಲಿ ಅಭ್ಯಾಸ ನಡೆಸಿದರು. ಗಂಭೀರ್ ಮಾರ್ಗದರ್ಶನ ನೀಡಿದರು. ಫೀಲ್ಡಿಂಗ್ ಅಭ್ಯಾಸವೂ ಸೇರಿದಂತೆ ವಿವಿಧ ಕಸರತ್ತುಗಳನ್ನು ಆಟಗಾರರು ಮಾಡಿದರು. </p>.<p>ತರಬೇತಿ ಅವಧಿಯಲ್ಲಿ ಓಟ, ಕ್ಯಾಚಿಂಗ್ ಮತ್ತು ಪ್ರತಿಯೊಬ್ಬ ಆಟಗಾರನೊಂದಿಗೆ ಪ್ರತ್ಯೇಕ ಮಾತುಕತೆ ಇದ್ದವು. ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಕೂಡ ಈ ಸಂದರ್ಭದಲ್ಲಿ ಸಹ ಆಟಗಾರರೊಂದಿಗೆ ಚರ್ಚೆ ನಡೆಸಿದರು. </p>.<p>ವಿಕೆಟ್ಕೀಪರ್–ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ಬ್ಯಾಟಿಂಗ್ ಕುರಿತ ಕೆಲವು ಸಲಹೆಗಳನ್ನು ಗಂಭೀರ್ ನೀಡಿದರು. ಆಲ್ರೌಂಡರ್ ಶಿವಂ ದುಬೆ ಅವರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದ್ದು ಕಂಡುಬಂತು. </p>.<p>ಶ್ರೀಲಂಕಾ ಪ್ರವಾಸದಲ್ಲಿ ಗಂಭೀರ್ ಅವರ ನೆರವು ಸಿಬ್ಬಂದಿಯಾಗಿರುವ ಮಾಜಿ ಕ್ರಿಕೆಟಿಗ ಅಭಿಷೇಕ್ ನಾಯರ್ ಮತ್ತು ನೆದರ್ಲೆಂಡ್ಸ್ ಬ್ಯಾಟರ್ ರಯನ್ ಟೆನ್ ಡಾಷೆ ಅವರೂ ಈ ಸಂದರ್ಭದಲ್ಲಿ ಕಾರ್ಯನಿರ್ವಹಿಸಿದರು. ಈ ಮೂವರೂ ಐಪಿಎಲ್ ಟೂರ್ನಿಯಲ್ಲಿ ಚಾಂಪಿಯನ್ ಆಗಿರುವ ಕೋಲ್ಕತ್ತ ನೈಟ್ ರೈಡರ್ಸ್ ತಂಡದಲ್ಲಿದ್ದರು. </p>.<p>ಈ ಹಿಂದೆ ರಾಹುಲ್ ದ್ರಾವಿಡ್ ಅವರು ಕೋಚ್ ಆಗಿದ್ದ ಸಂದರ್ಭದಲ್ಲಿ ಫೀಲ್ಡಿಂಗ್ ಕೋಚ್ ಆಗಿದ್ದ ಟಿ. ದಿಲೀಪ್ ಅವರೂ ತಂಡದಲ್ಲಿ ಮುಂದುವರಿದಿದ್ದಾರೆ. ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿರುವ ಸಾಯಿರಾಜ್ ಬಹುತುಳೆ ಕೂಡ ಹಂಗಾಮಿ ಬೌಲಿಂಗ್ ಕೋಚ್ ಆಗಿ ತಂಡದಲ್ಲಿದ್ದಾರೆ.</p>.<p>ಭಾರತ ತಂಡವು ಈಚೆಗೆ ಟಿ20 ವಿಶ್ವಕಪ್ ಜಯಿಸಿದ ನಂತರ ಕೋಚ್ ಆಗಿದ್ದ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿಯು ಮುಕ್ತಾಯವಾಗಿತ್ತು. ಅವರ ನಂತರ ಗಂಭೀರ್ ನೇಮಕವಾಗಿದ್ದಾರೆ. </p>.<p>ಇದೇ 27ರಿಂದ ಲಂಕಾ ವಿರುದ್ಧದ ಟಿ20 ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>