ಬುಧವಾರ ಇಲ್ಲಿ ನಡೆದ ಬಿಸಿಸಿಐ ವಾರ್ಷಿಕ ಮಹಾಸಭೆಯಲ್ಲಿ, ಮಂಡಳಿಯ 39ನೇ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಅವರು ಮಾಧ್ಯಮದವರ ಜೊತೆ ಮಾತನಾಡಿದರು. ‘ವಿಶ್ವಾಸಾರ್ಹತೆ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ವಿಷಯದಲ್ಲೂ ಅಷ್ಟೇ. ರಾಷ್ಟ್ರೀಯ ತಂಡವನ್ನು ಮುನ್ನಡೆಸಿದ ರೀತಿಯೇ ಆಡಳಿತವನ್ನೂ ಉತ್ತಮವಾಗಿ ನಿರ್ವಹಿಸುತ್ತೇನೆ’ ಎಂದರು.