ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್, ಐಪಿಎಲ್ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್ ಸೀಲ್, ಅಭಿಜಿತ್ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್ಮನ್ ಗಂಗೂಲಿ ಅವರಿಂದ ಸ್ಪಷ್ಟನೆಯನ್ನೂ ಕೇಳಿತ್ತು.