<p><strong>ನವದೆಹಲಿ:</strong> ಹಿತಾಸಕ್ತಿ ಸಂಘರ್ಷ ಆರೋಪ ಎದುರಿಸುತ್ತಿರುವ ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿಗೆ ಬಿಸಿಸಿಐ ಒಂಬುಡ್ಸ್ಮನ್ ಡಿ.ಕೆ.ಜೈನ್ ಮಂಗಳವಾರ ಸಮನ್ಸ್ ನೀಡಿದ್ದಾರೆ.</p>.<p>ಏಪ್ರಿಲ್ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ನಿಗದಿತ ದಿನದಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಆಯೋಜನೆಯಾಗಿದೆ.</p>.<p>ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್, ಐಪಿಎಲ್ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್ ಸೀಲ್, ಅಭಿಜಿತ್ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್ಮನ್ ಗಂಗೂಲಿ ಅವರಿಂದ ಸ್ಪಷ್ಟನೆಯನ್ನೂ ಕೇಳಿತ್ತು.</p>.<p>‘ಎರಡು ಹುದ್ದೆಗಳನ್ನು ನಿಭಾಯಿಸುತ್ತಿರುವುದು ನಿಜ. ಇದು ಬಿಸಿಸಿಐ ಸಂವಿಧಾನಕ್ಕೆ ವಿರುದ್ಧವಾಗಿಲ್ಲ. ಹೀಗಾಗಿ ಹಿತಾಸಕ್ತಿ ಸಂಘರ್ಷದ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗಂಗೂಲಿ, ಕೆಲ ದಿನಗಳ ಹಿಂದೆ ಒಂಬುಡ್ಸ್ಮನ್ಗೆ ಬರೆದಿದ್ದ ಪತ್ರದಲ್ಲಿ ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಿತಾಸಕ್ತಿ ಸಂಘರ್ಷ ಆರೋಪ ಎದುರಿಸುತ್ತಿರುವ ಹಿರಿಯ ಕ್ರಿಕೆಟಿಗ ಸೌರವ್ ಗಂಗೂಲಿಗೆ ಬಿಸಿಸಿಐ ಒಂಬುಡ್ಸ್ಮನ್ ಡಿ.ಕೆ.ಜೈನ್ ಮಂಗಳವಾರ ಸಮನ್ಸ್ ನೀಡಿದ್ದಾರೆ.</p>.<p>ಏಪ್ರಿಲ್ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ನಿಗದಿತ ದಿನದಂದು ಫಿರೋಜ್ ಷಾ ಕೋಟ್ಲಾ ಮೈದಾನದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಆಯೋಜನೆಯಾಗಿದೆ.</p>.<p>ಬಂಗಾಳ ಕ್ರಿಕೆಟ್ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಸೌರವ್, ಐಪಿಎಲ್ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್ ಸೀಲ್, ಅಭಿಜಿತ್ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್ಮನ್ ಗಂಗೂಲಿ ಅವರಿಂದ ಸ್ಪಷ್ಟನೆಯನ್ನೂ ಕೇಳಿತ್ತು.</p>.<p>‘ಎರಡು ಹುದ್ದೆಗಳನ್ನು ನಿಭಾಯಿಸುತ್ತಿರುವುದು ನಿಜ. ಇದು ಬಿಸಿಸಿಐ ಸಂವಿಧಾನಕ್ಕೆ ವಿರುದ್ಧವಾಗಿಲ್ಲ. ಹೀಗಾಗಿ ಹಿತಾಸಕ್ತಿ ಸಂಘರ್ಷದ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಗಂಗೂಲಿ, ಕೆಲ ದಿನಗಳ ಹಿಂದೆ ಒಂಬುಡ್ಸ್ಮನ್ಗೆ ಬರೆದಿದ್ದ ಪತ್ರದಲ್ಲಿ ಸ್ಪಷ್ಟಪಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>